Home / ಕವನ / ಕವಿತೆ / ಕಿರು ಪರಿಚಯ

ಕಿರು ಪರಿಚಯ

ನಾನು ಯಾರೆಂದಿರಾ?
ನಾನು ಬುದ್ಧಿವಂತ
ಬುದ್ಧನ ಜಾತಿಯಲಿ ಹುಟ್ಟಿ
ಸಾರಸ್ವತ ಲೋಕವನು
ಕೈಯಿಂದ ತಟ್ಟಿ
ಜ್ಞಾನ ಭಂಡಾರವನು
ಗಂಟಾಗಿ ಕಟ್ಟಿ
ಅಜ್ಞಾನ ಅಂಧಕಾರವನು
ಹೆಮ್ಮೆಯಿಂದ ಮೆಟ್ಟಿ
ಪಡೆದ ಬುದ್ಧಿ ಸ್ವಂತ
ನಾನು ಬುದ್ಧಿವಂತ.

ಶಿಕ್ಷಕರ ಶಿಕ್ಷಿಸ ಬಲ್ಲೆ
ಪ್ರಿಂಸಿಪಾಲನ ಕ್ಯಾಬಿನ ಖಿಂಡಿಗೆ
ಕಲ್ಲು ಹೊಡೆದು ಕನ್ನಡಿ ಮುರಿಯ ಬಲ್ಲೆ
ಲ್ಯಾಬಿನಲ್ಲಿ ಸಿಲಿಂಡರಿ
ನ ದ್ರವಗಳ ಚೆಲ್ಲಿ
ಪ್ರಯೋಗ ನಡೆಸ ಬಲ್ಲೆ
ಪರೀಕ್ಷೆಯ ಹಾಲಿನಲಿ
ಅರ್ಧ ಗಂಟೆಯೆ ಕುಳಿತು
ಪಾಸಾಗ ಬಲ್ಲೆ
ಪಾಸಾಗದೆಯು ಮುಂದಿನ ಕ್ಲಾಸಿಗೆ
ಹೋಗ ಬಲ್ಲೆ
ವಿಶ್ವವಿದ್ಯಾಲಯಗಳು
ನನ್ನ ಅಂಕಿತದಲ್ಲಿ
ಮೂರು ವಿಷಯಗಳ ಮೇಲೆ
ಎಮ್ಮೆ ಕಟ್ಟಿ
ನನ್ನ ಹೆಸರಿನ ಮುಂದೆ
ಡಿಗ್ರಿಗಳ ಕಂತೆ ನಿಲ್ಲಿಸ ಬಲ್ಲೆ
ದೇಶದಲ್ಲಿ ನನ್ನ ಯೋಗ್ಯತೆಗೆ
ಸರಿಯಾದ ನೌಕರಿಯೆ ಕಡಿಮೆ
ಅದಕ್ಕೆಂದೆ ನನಗಿಲ್ಲ ದುಡಿಮೆ
ನಾನು ಸಾಧು ಸಂತ
ನಾನು ನಿರ್ಧನವಂತ.

ತರುಣರ ಗುಂಪಿಗೆ ನಾನು ನಾಯಕ
ಸಂಪು, ಗುಲ್ಲು ಗಲಾಟೆಗಳೆ ನನ್ನ ಕಾಯಕ
ಕ್ಯೂಮುರಿ, ಫ್ಲರ್ಟ್ ಮಾಡು
ಧೂಮಪಾನ, ಬೀರಕುಡಿ
ವುದು ನನ್ನ ನಿತ್ಯಮನರಂಜನೆಗಾಗಿ
ಇಂದ್ರಮಾಡಿದ್ದ. ಕೃಷ್ಣ ಆಡಿದ್ದ
ನಾನು ಭಾಗವತ, ವೇದಗಳ
ಓದಿರುವ ಬುದ್ಧಿವಂತ

ನಾನು ಅಜ್ಞಾನಿ ಅನಂತ.

ಕಸ್ಮೈದೇವಾಯ ಎಂಬ ಸವಾಲಿಗೆ
ಸವಾಲಾಗಿ ನೂರು ದೇವರ
ಸಮನಾಗಿ ಪೂಜಿಸ ಬಲ್ಲೆ
ಮಂದಿರ ಮಸೀದಿ ಚರ್ಚ್
ಸಾಯಿಬಾಬಾ, ಶಿರಡಿ ಬಾಬಾ
ರಜನೀಶ ಬ್ರಹ್ಮಚಾರಿ ಬಾಬಾ
ಎಲ್ಲಿರುವೆ ತಂದೆ ಬಾ. ಬಾ.
ಎನ್ನುತ
ಹರದಾರಿ ಹರಿದ್ವಾರಗಳ ಸುತ್ತಿ
ದೇವರ ಪತ್ತೆ ಹಚ್ಚಬಲ್ಲೆ.

ನಾನು ಸಾಹಿತಿ-ಕವಿ,
ದತ್ತಾಡಿಗ ಪುಟಪ್‌ಗಳ
ಕಾವ್ಯದ ಹಿಂಡುವೆನು ಕಿವಿ
ನಾಕು ತಂತಿಯಲಿ ಒಂದನು ಮುರಿದು
ರಾಮಾಯಣ ದರ್ಶನದ ಶಿಲ್ಪದ ಮೇಲೆ
“ಕಟ್ಟುವೆನು ನಾನು ಹೊಸನಾಡೊಂದನು
ರಸದ ಬೀಡೊಂದನು”
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...