Home / ಕವನ / ಕವಿತೆ / ಕಿರು ಪರಿಚಯ

ಕಿರು ಪರಿಚಯ

ನಾನು ಯಾರೆಂದಿರಾ?
ನಾನು ಬುದ್ಧಿವಂತ
ಬುದ್ಧನ ಜಾತಿಯಲಿ ಹುಟ್ಟಿ
ಸಾರಸ್ವತ ಲೋಕವನು
ಕೈಯಿಂದ ತಟ್ಟಿ
ಜ್ಞಾನ ಭಂಡಾರವನು
ಗಂಟಾಗಿ ಕಟ್ಟಿ
ಅಜ್ಞಾನ ಅಂಧಕಾರವನು
ಹೆಮ್ಮೆಯಿಂದ ಮೆಟ್ಟಿ
ಪಡೆದ ಬುದ್ಧಿ ಸ್ವಂತ
ನಾನು ಬುದ್ಧಿವಂತ.

ಶಿಕ್ಷಕರ ಶಿಕ್ಷಿಸ ಬಲ್ಲೆ
ಪ್ರಿಂಸಿಪಾಲನ ಕ್ಯಾಬಿನ ಖಿಂಡಿಗೆ
ಕಲ್ಲು ಹೊಡೆದು ಕನ್ನಡಿ ಮುರಿಯ ಬಲ್ಲೆ
ಲ್ಯಾಬಿನಲ್ಲಿ ಸಿಲಿಂಡರಿ
ನ ದ್ರವಗಳ ಚೆಲ್ಲಿ
ಪ್ರಯೋಗ ನಡೆಸ ಬಲ್ಲೆ
ಪರೀಕ್ಷೆಯ ಹಾಲಿನಲಿ
ಅರ್ಧ ಗಂಟೆಯೆ ಕುಳಿತು
ಪಾಸಾಗ ಬಲ್ಲೆ
ಪಾಸಾಗದೆಯು ಮುಂದಿನ ಕ್ಲಾಸಿಗೆ
ಹೋಗ ಬಲ್ಲೆ
ವಿಶ್ವವಿದ್ಯಾಲಯಗಳು
ನನ್ನ ಅಂಕಿತದಲ್ಲಿ
ಮೂರು ವಿಷಯಗಳ ಮೇಲೆ
ಎಮ್ಮೆ ಕಟ್ಟಿ
ನನ್ನ ಹೆಸರಿನ ಮುಂದೆ
ಡಿಗ್ರಿಗಳ ಕಂತೆ ನಿಲ್ಲಿಸ ಬಲ್ಲೆ
ದೇಶದಲ್ಲಿ ನನ್ನ ಯೋಗ್ಯತೆಗೆ
ಸರಿಯಾದ ನೌಕರಿಯೆ ಕಡಿಮೆ
ಅದಕ್ಕೆಂದೆ ನನಗಿಲ್ಲ ದುಡಿಮೆ
ನಾನು ಸಾಧು ಸಂತ
ನಾನು ನಿರ್ಧನವಂತ.

ತರುಣರ ಗುಂಪಿಗೆ ನಾನು ನಾಯಕ
ಸಂಪು, ಗುಲ್ಲು ಗಲಾಟೆಗಳೆ ನನ್ನ ಕಾಯಕ
ಕ್ಯೂಮುರಿ, ಫ್ಲರ್ಟ್ ಮಾಡು
ಧೂಮಪಾನ, ಬೀರಕುಡಿ
ವುದು ನನ್ನ ನಿತ್ಯಮನರಂಜನೆಗಾಗಿ
ಇಂದ್ರಮಾಡಿದ್ದ. ಕೃಷ್ಣ ಆಡಿದ್ದ
ನಾನು ಭಾಗವತ, ವೇದಗಳ
ಓದಿರುವ ಬುದ್ಧಿವಂತ

ನಾನು ಅಜ್ಞಾನಿ ಅನಂತ.

ಕಸ್ಮೈದೇವಾಯ ಎಂಬ ಸವಾಲಿಗೆ
ಸವಾಲಾಗಿ ನೂರು ದೇವರ
ಸಮನಾಗಿ ಪೂಜಿಸ ಬಲ್ಲೆ
ಮಂದಿರ ಮಸೀದಿ ಚರ್ಚ್
ಸಾಯಿಬಾಬಾ, ಶಿರಡಿ ಬಾಬಾ
ರಜನೀಶ ಬ್ರಹ್ಮಚಾರಿ ಬಾಬಾ
ಎಲ್ಲಿರುವೆ ತಂದೆ ಬಾ. ಬಾ.
ಎನ್ನುತ
ಹರದಾರಿ ಹರಿದ್ವಾರಗಳ ಸುತ್ತಿ
ದೇವರ ಪತ್ತೆ ಹಚ್ಚಬಲ್ಲೆ.

ನಾನು ಸಾಹಿತಿ-ಕವಿ,
ದತ್ತಾಡಿಗ ಪುಟಪ್‌ಗಳ
ಕಾವ್ಯದ ಹಿಂಡುವೆನು ಕಿವಿ
ನಾಕು ತಂತಿಯಲಿ ಒಂದನು ಮುರಿದು
ರಾಮಾಯಣ ದರ್ಶನದ ಶಿಲ್ಪದ ಮೇಲೆ
“ಕಟ್ಟುವೆನು ನಾನು ಹೊಸನಾಡೊಂದನು
ರಸದ ಬೀಡೊಂದನು”
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...