ಕಿರು ಪರಿಚಯ

ನಾನು ಯಾರೆಂದಿರಾ?
ನಾನು ಬುದ್ಧಿವಂತ
ಬುದ್ಧನ ಜಾತಿಯಲಿ ಹುಟ್ಟಿ
ಸಾರಸ್ವತ ಲೋಕವನು
ಕೈಯಿಂದ ತಟ್ಟಿ
ಜ್ಞಾನ ಭಂಡಾರವನು
ಗಂಟಾಗಿ ಕಟ್ಟಿ
ಅಜ್ಞಾನ ಅಂಧಕಾರವನು
ಹೆಮ್ಮೆಯಿಂದ ಮೆಟ್ಟಿ
ಪಡೆದ ಬುದ್ಧಿ ಸ್ವಂತ
ನಾನು ಬುದ್ಧಿವಂತ.

ಶಿಕ್ಷಕರ ಶಿಕ್ಷಿಸ ಬಲ್ಲೆ
ಪ್ರಿಂಸಿಪಾಲನ ಕ್ಯಾಬಿನ ಖಿಂಡಿಗೆ
ಕಲ್ಲು ಹೊಡೆದು ಕನ್ನಡಿ ಮುರಿಯ ಬಲ್ಲೆ
ಲ್ಯಾಬಿನಲ್ಲಿ ಸಿಲಿಂಡರಿ
ನ ದ್ರವಗಳ ಚೆಲ್ಲಿ
ಪ್ರಯೋಗ ನಡೆಸ ಬಲ್ಲೆ
ಪರೀಕ್ಷೆಯ ಹಾಲಿನಲಿ
ಅರ್ಧ ಗಂಟೆಯೆ ಕುಳಿತು
ಪಾಸಾಗ ಬಲ್ಲೆ
ಪಾಸಾಗದೆಯು ಮುಂದಿನ ಕ್ಲಾಸಿಗೆ
ಹೋಗ ಬಲ್ಲೆ
ವಿಶ್ವವಿದ್ಯಾಲಯಗಳು
ನನ್ನ ಅಂಕಿತದಲ್ಲಿ
ಮೂರು ವಿಷಯಗಳ ಮೇಲೆ
ಎಮ್ಮೆ ಕಟ್ಟಿ
ನನ್ನ ಹೆಸರಿನ ಮುಂದೆ
ಡಿಗ್ರಿಗಳ ಕಂತೆ ನಿಲ್ಲಿಸ ಬಲ್ಲೆ
ದೇಶದಲ್ಲಿ ನನ್ನ ಯೋಗ್ಯತೆಗೆ
ಸರಿಯಾದ ನೌಕರಿಯೆ ಕಡಿಮೆ
ಅದಕ್ಕೆಂದೆ ನನಗಿಲ್ಲ ದುಡಿಮೆ
ನಾನು ಸಾಧು ಸಂತ
ನಾನು ನಿರ್ಧನವಂತ.

ತರುಣರ ಗುಂಪಿಗೆ ನಾನು ನಾಯಕ
ಸಂಪು, ಗುಲ್ಲು ಗಲಾಟೆಗಳೆ ನನ್ನ ಕಾಯಕ
ಕ್ಯೂಮುರಿ, ಫ್ಲರ್ಟ್ ಮಾಡು
ಧೂಮಪಾನ, ಬೀರಕುಡಿ
ವುದು ನನ್ನ ನಿತ್ಯಮನರಂಜನೆಗಾಗಿ
ಇಂದ್ರಮಾಡಿದ್ದ. ಕೃಷ್ಣ ಆಡಿದ್ದ
ನಾನು ಭಾಗವತ, ವೇದಗಳ
ಓದಿರುವ ಬುದ್ಧಿವಂತ

ನಾನು ಅಜ್ಞಾನಿ ಅನಂತ.

ಕಸ್ಮೈದೇವಾಯ ಎಂಬ ಸವಾಲಿಗೆ
ಸವಾಲಾಗಿ ನೂರು ದೇವರ
ಸಮನಾಗಿ ಪೂಜಿಸ ಬಲ್ಲೆ
ಮಂದಿರ ಮಸೀದಿ ಚರ್ಚ್
ಸಾಯಿಬಾಬಾ, ಶಿರಡಿ ಬಾಬಾ
ರಜನೀಶ ಬ್ರಹ್ಮಚಾರಿ ಬಾಬಾ
ಎಲ್ಲಿರುವೆ ತಂದೆ ಬಾ. ಬಾ.
ಎನ್ನುತ
ಹರದಾರಿ ಹರಿದ್ವಾರಗಳ ಸುತ್ತಿ
ದೇವರ ಪತ್ತೆ ಹಚ್ಚಬಲ್ಲೆ.

ನಾನು ಸಾಹಿತಿ-ಕವಿ,
ದತ್ತಾಡಿಗ ಪುಟಪ್‌ಗಳ
ಕಾವ್ಯದ ಹಿಂಡುವೆನು ಕಿವಿ
ನಾಕು ತಂತಿಯಲಿ ಒಂದನು ಮುರಿದು
ರಾಮಾಯಣ ದರ್ಶನದ ಶಿಲ್ಪದ ಮೇಲೆ
“ಕಟ್ಟುವೆನು ನಾನು ಹೊಸನಾಡೊಂದನು
ರಸದ ಬೀಡೊಂದನು”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಮ್ಮನ ಮಡಿಲನೇರಿ
Next post ಕೂಳ ಕೊಂಡು ತಂದರದು ಸಾವಯವವಾದೀತೇ ?

ಸಣ್ಣ ಕತೆ

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…