Home / ಕವನ / ಕವಿತೆ / ಕಿರು ಪರಿಚಯ

ಕಿರು ಪರಿಚಯ

ನಾನು ಯಾರೆಂದಿರಾ?
ನಾನು ಬುದ್ಧಿವಂತ
ಬುದ್ಧನ ಜಾತಿಯಲಿ ಹುಟ್ಟಿ
ಸಾರಸ್ವತ ಲೋಕವನು
ಕೈಯಿಂದ ತಟ್ಟಿ
ಜ್ಞಾನ ಭಂಡಾರವನು
ಗಂಟಾಗಿ ಕಟ್ಟಿ
ಅಜ್ಞಾನ ಅಂಧಕಾರವನು
ಹೆಮ್ಮೆಯಿಂದ ಮೆಟ್ಟಿ
ಪಡೆದ ಬುದ್ಧಿ ಸ್ವಂತ
ನಾನು ಬುದ್ಧಿವಂತ.

ಶಿಕ್ಷಕರ ಶಿಕ್ಷಿಸ ಬಲ್ಲೆ
ಪ್ರಿಂಸಿಪಾಲನ ಕ್ಯಾಬಿನ ಖಿಂಡಿಗೆ
ಕಲ್ಲು ಹೊಡೆದು ಕನ್ನಡಿ ಮುರಿಯ ಬಲ್ಲೆ
ಲ್ಯಾಬಿನಲ್ಲಿ ಸಿಲಿಂಡರಿ
ನ ದ್ರವಗಳ ಚೆಲ್ಲಿ
ಪ್ರಯೋಗ ನಡೆಸ ಬಲ್ಲೆ
ಪರೀಕ್ಷೆಯ ಹಾಲಿನಲಿ
ಅರ್ಧ ಗಂಟೆಯೆ ಕುಳಿತು
ಪಾಸಾಗ ಬಲ್ಲೆ
ಪಾಸಾಗದೆಯು ಮುಂದಿನ ಕ್ಲಾಸಿಗೆ
ಹೋಗ ಬಲ್ಲೆ
ವಿಶ್ವವಿದ್ಯಾಲಯಗಳು
ನನ್ನ ಅಂಕಿತದಲ್ಲಿ
ಮೂರು ವಿಷಯಗಳ ಮೇಲೆ
ಎಮ್ಮೆ ಕಟ್ಟಿ
ನನ್ನ ಹೆಸರಿನ ಮುಂದೆ
ಡಿಗ್ರಿಗಳ ಕಂತೆ ನಿಲ್ಲಿಸ ಬಲ್ಲೆ
ದೇಶದಲ್ಲಿ ನನ್ನ ಯೋಗ್ಯತೆಗೆ
ಸರಿಯಾದ ನೌಕರಿಯೆ ಕಡಿಮೆ
ಅದಕ್ಕೆಂದೆ ನನಗಿಲ್ಲ ದುಡಿಮೆ
ನಾನು ಸಾಧು ಸಂತ
ನಾನು ನಿರ್ಧನವಂತ.

ತರುಣರ ಗುಂಪಿಗೆ ನಾನು ನಾಯಕ
ಸಂಪು, ಗುಲ್ಲು ಗಲಾಟೆಗಳೆ ನನ್ನ ಕಾಯಕ
ಕ್ಯೂಮುರಿ, ಫ್ಲರ್ಟ್ ಮಾಡು
ಧೂಮಪಾನ, ಬೀರಕುಡಿ
ವುದು ನನ್ನ ನಿತ್ಯಮನರಂಜನೆಗಾಗಿ
ಇಂದ್ರಮಾಡಿದ್ದ. ಕೃಷ್ಣ ಆಡಿದ್ದ
ನಾನು ಭಾಗವತ, ವೇದಗಳ
ಓದಿರುವ ಬುದ್ಧಿವಂತ

ನಾನು ಅಜ್ಞಾನಿ ಅನಂತ.

ಕಸ್ಮೈದೇವಾಯ ಎಂಬ ಸವಾಲಿಗೆ
ಸವಾಲಾಗಿ ನೂರು ದೇವರ
ಸಮನಾಗಿ ಪೂಜಿಸ ಬಲ್ಲೆ
ಮಂದಿರ ಮಸೀದಿ ಚರ್ಚ್
ಸಾಯಿಬಾಬಾ, ಶಿರಡಿ ಬಾಬಾ
ರಜನೀಶ ಬ್ರಹ್ಮಚಾರಿ ಬಾಬಾ
ಎಲ್ಲಿರುವೆ ತಂದೆ ಬಾ. ಬಾ.
ಎನ್ನುತ
ಹರದಾರಿ ಹರಿದ್ವಾರಗಳ ಸುತ್ತಿ
ದೇವರ ಪತ್ತೆ ಹಚ್ಚಬಲ್ಲೆ.

ನಾನು ಸಾಹಿತಿ-ಕವಿ,
ದತ್ತಾಡಿಗ ಪುಟಪ್‌ಗಳ
ಕಾವ್ಯದ ಹಿಂಡುವೆನು ಕಿವಿ
ನಾಕು ತಂತಿಯಲಿ ಒಂದನು ಮುರಿದು
ರಾಮಾಯಣ ದರ್ಶನದ ಶಿಲ್ಪದ ಮೇಲೆ
“ಕಟ್ಟುವೆನು ನಾನು ಹೊಸನಾಡೊಂದನು
ರಸದ ಬೀಡೊಂದನು”
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...