ವಿಕ್ಷಿಪ್ತ

ಗಲ್ಲಕ್ಕೆ ಕೈಹೊತ್ತು ಕೂತರೆ ಬುದ್ಧನಂತೆ
ತಲೆಯಲಿದ್ದುದು ಪೆನ್ನಿಗೆ ಇಳಿದು
ಕಾಗದದ ಮೇಲೆ ಮೂಡುವದಿಲ್ಲ.

ವಿಕ್ಷೇಪ…
ಅನುಕರಣೆಯ ಅಂಟುರೋಗ
ಅಸ್ತವ್ಯಸ್ತ ಮನದ ಒಡಕು
ವಿಚಾರ ಭಾವಗಳ ತೊಡಕು
ವ್ಯಥಾ ಕಾಲಕ್ಷೇಪ…!

ಚಪಲ…
ಇಲ್ಲದುದ ಬೇಕೆಂಬ
ಹುಂಬತನ.

ಮುಖದ ಮೇಲೆ ಕಳೆಯಿಲ್ಲ
ಕಣ್ಣಿನಲಿ ಹೊಳಪಿಲ್ಲ….. ಕಪ್ಪು ವರ್ತುಲ
ಕೂದಲು ತುಂಬಿದ ಗಲ್ಲ.

ಕತ್ತು; ನೀನು ಜಾತಿ ಹಿಪ್ಪಿ ಅಲ್ಲ…..
ಆ ಹೆಣ್ಣಿನ ಅಗಲವಾದ ಬರಿದು ಸೊಂಟವ
ನೋಡಿ ಕಣ್ಣಿನ ಹಸಿವ ತಣಿಸು
ಪರೀಕ್ಷೆ ಬರೆವ ತಲೆ ನಿನಗಿಲ್ಲ
ವಿದ್ಯೆ ನಿನ್ನ ಸೊತ್ತಲ್ಲ….

ಕಾಗದದ ಮೇಲೆ ಪೆನ್ನಿನ ಮಸಿ ಬೀಳುವುದು
ಅಲ್ಲ ವಿಚಾರ ವಸ್ತು
ಅದು ತಲೆಯೊಳಗಿನ ಕಸರತ್ತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಾರು ಯಾರಿಗಾಗಿ
Next post ಜಾಣಾ ನಾವಾಗದಿದೇನೆಲ್ಲದಕು ತಜ್ಞರವಲಂಬನೆಯೊ?

ಸಣ್ಣ ಕತೆ

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…