ಧೂರ್ತ

ಹೊಲೆಯ ನಿಕೃಷ್ಟ
ಮಣ್ಣಿನ ಮಗ
ಮಣ್ಣಿನ ವಾಸನೆಗೆ
ಹುಟ್ಟಿದ ತಪ್ಪಿಗೆ
ಹುಟ್ಟಿದ ಮಣ್ಣಿನ ನೆಲವನ್ನೆ
ದುರ್ಗಂಧಗೊಳಿಸಿ
ತನ್ನ ಧೂರ್ತ ಮಹತ್ವಾಕಾಂಕ್ಷೆಗೆ
ಉಸಿರು ಹೋಗುವ ಮೊದಲು
ಕೆಂಪು ದುರ್ಗದ ತುದಿಯನ್ನೇರಿ
ದೇಹ ಬಲ ಉಡುಗಿದ್ದರೂ
ನೀತಿಗೆ ಕ್ಷಯ ಹಿಡಿದು
ಅಧಿಕಾರದ ಮದದಿಂದ, ಪದದೊರೆತ
ತುಷ್ಟಿಯ ತೊರೆಯುಕ್ಕಿ ತಾನು
ಸೆರೆ ಕುಡಿದ ಕಪಿಯಾದರೂ
ಜನತೆಗೆ ಕೊಡುವ ಸಂದೇಶವೆಂದು
ಬಾಯಿಗೆ ಬಂದುದನೊದರಿ-
ಈ ಕೆಲವು ದಿನಗಳ ಹಿಂದೆ
ಗಾಂಧೀ ಸಮಾಧಿಯ ಎದುರು
ತಾನು ಮಾಡಿದ ಪಣದ, ವೃಣದ ಮುಖಕ್ಕೆ
ರಾಡಿ ಎರಚು-
ಸ್ವರ್ಗದಲ್ಲಿರುವ ಗಾಂಧಿ
ಜನನಾಯಕನೆಂದು
ಜನರಿಗೆ ಟೋಪಿ ಹಾಕುವ
ಈ ಡೋಂಗಿ ಮಾಡಿದ
ಅಗಸತನಕ್ಕೆ ತುಕ್ಕು ಹಿಡಿದು
ದರಿದ್ರಗೊಂಡ ಅಧಪತನಕ್ಕೆ
ನಾಚಿ, ಕಂಬನಿಯ ತೊರೆಯನ್ನು
ಸುರಿಸುತ್ತಿರಬಹುದು –
ಅದರಲ್ಲಿ ಕಂತಿ ಈ ಪಾಖಂಡಿ
ನಿರ್ನಾಮಗೊಂಡಾಗ
ಮಣ್ಣಿನಂರಾಳದಲಿ ಹೂತು ಹೋದಾಗ
ಆರೋಗ್ಯಕರ ಮೊಳಿಕೆಯೊಂದು
ನೆಲಬಿರಿದು ಹೊರಬರುವುದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾನಲ್ಲ ನೀನಲ್ಲ
Next post ಕಾಣಲೆಂದು ನಿಂದಲ್ಲೇ ನಿಂದರೇನು ಬಂತು?

ಸಣ್ಣ ಕತೆ

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys