Home / ಕವನ / ಕವಿತೆ / ಸ್ವಗತ

ಸ್ವಗತ

ದ್ರೋಣ ಕೆನ್ನೆಗೆ ಕೈಹೊತ್ತು ಕುಳಿತ
ದೇವತೆಗಳು ಬಂದು ಕರೆದರೂ
ದೇವ ಸಭೆಯಲ್ಲಿ ತನ್ನ
ಕರ್ಮ ವಿಮರ್ಶೆಯಾಗಲಿದೆ ಎಂದು
ಹೊಳೆದರೂ, ಕಡಿಮೆಯಾಗಲಿಲ್ಲ
ಯೋಚನೆಗಳ ಏರಿಳಿತ
ಕೃಷ್ಣ ಬಂದಿದ್ದಾಗ ಮಣಿದು, ಕೈ ಮುಗಿದು
‘ನಿನ್ನ ಸಖರೈವರನು ನೋಯಿಸಿ’ನೆಂದು
ಮನದಲ್ಲಿ ಮಾಡಿದ್ದ ದೃಢ
ಉಪಕೃತಿಯಾಗಿ ಇಲ್ಲಿ ಬರಿಸಿದೆ
ಸ್ವರ್ಗ ಪದವಿಯ ಭಾಗ್ಯ ತರಿಸಿದೆ
ಒಂದಲ್ಲ, ಹಲವು ಸಲ
ನೊಂದು ಕುಲಜಾತಿಗಳ ಮಾತೆತ್ತಿ
ವೀರನನು ಒಡೆಯನ ಸ್ನೇಹಿಯನು ದಾನಶೂರನನು
ನೋಯಿಸಿದ, ಘಾಸಿಗೊಳಿಸಿದ ಛಲ,
ದಲಿತ, ಬಡಪಾಯಿ, ಕಲಿಸದೆಯೆ
ಕಲಿತ ವಿದ್ಯೆಯನ್ನು ಬೇಡಿ
ಕಸಿದುಕೊಂಡ ಖಳ, ನಾನು –
ಮಗನ ಮೋಹವೆ ಮುಂದು
ಪತಿಯವಸರ ಹಿಂದು, ಹಿಂದಾಗಿ
ಹೋರುವುದ ಮರೆತು
ತೊರೆದ ಹರಣಕೆ ಇಂದು ಮಾನ – ಸನ್ಮಾನ
ಇದು ಅವಮಾನ!
ಅರ್ಹನಲ್ಲ ನಾನಿದಕೆ
ನನ್ನ ಓಝತ್ವಕ್ಕಿಲ್ಲ ಸಾತ್ವಿಕೆ
ಭೇದಭಾವದ ಶಿಕ್ಷಣವ ಒರೆದಾತ
ತನ್ನ ಬಡತನದ ಸಿಟ್ಟಿನಲ್ಲಿ ಹುಟ್ಟಿದ
ಮಾನಹಾನಿಯ ಸೇಡಿಗೆ ಬಲಿಕೊಟ್ಟ
ಬಂಧುಗಳೆ ಬಡಿದಾಡಿ
ಒಂದು ಕುಲದ, ಒಂದು ಬಲದ
ಒಂದು ತತ್ವದ ಕೊಲೆಗೆ
ಹೇತುವಾದಾತ ಒಲ್ಲ
ಸಗ್ಗಸುಖ ನನಗೆ ಸಲ್ಲ.
*****

Tagged:

Leave a Reply

Your email address will not be published. Required fields are marked *

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...