Home / ಕವನ / ಕವಿತೆ / ನೆಲದ ಬೆಲೆ ಉಳಿಸೋಣ

ನೆಲದ ಬೆಲೆ ಉಳಿಸೋಣ

ಅಟ್ಟೋಣ, ಮೆಟ್ಟೋಣ ಕೆಚ್ಚೆದೆಯ ಮಿಂಚಿನಲಿ
ತಟ್ಟೋಣ ದವಡೆಯನೆ ಧಾಂಡಿಗರ ಸಂಚಿನಲಿ….

ನಮ್ಮುಸಿರ ಬಿಸಿಯು ಆರುವ ಮುನ್ನ
ನಮ್ಮೆದೆಯ ಅಸುವು ನೀಗುವ ಮುನ್ನ
ನಾಡಿಗರ ಹಸಿರಕ್ತ ಬರಿದೆ ಹೋಗುವ ಮುನ್ನ
ಕ್ರೋಧದುರಿ ಮೈತಾಳಿ ನಮ್ಮನೇ ಸುಡುವ ಮುನ್ನ…
ಅಟ್ಟೋಣ ದ್ರೋಹಿಗಳ, ಮೆಟ್ಟೋಣ ಬನ್ನಿ
ಕಟ್ಟಳೆಯ ಬದಿಗಿಟ್ಟು ಉರಿವ ಬೆಂಕಿಯ ತನ್ನಿ

ನಮ್ಮಳಲು ನಮಗಿರಲಿ
ಕೆಂಪಿರುಳು ಬೇಡ
ಸ್ವಾತಂತ್ರ್ಯ ಉಳಿದಿರಲಿ
ದಾಸ್ಯದಳು ಬೇಡ….

ನಮ್ಮೂರು ಕನಸಿನ ನಾಕ
ನಮ್ಮವರು ಉಸಿರಿತ್ತು
ಸಾವನ್ನೆ ಮುತ್ತಿಟ್ಟು
ನಮಗಿತ್ತ ಸುರಲೋಕ….

ನಮ್ಮೊಡಲ ಒಡೆಯರು ನಾವು
ಒಮ್ಮನದಿ ವೈರಿಗಳ ಹೊಡೆದು
ಜೀವ-ಭಾವೈಕ್ಯದ ಸಿಡಿಲ-ಮಳೆಗರೆದು
ದೇಶಕಂಟಕರ ಕೆಡಿಸುವೆವು….. ಇಲ್ಲವೆ ಸಾವು!

ಕಾಳರಾತ್ರಿಯ ಭಯವ ತಡೆದು
ಹಾಳು ಪ್ರಭುತನದ ಬೇಡಿ ಒಡೆದು
ಹೊಸತೇಜ-ಓಜಗಳ ಮೆರಗಿಂದ
ರಸಭರಿತ ಬೀಡಕಟ್ಟಿಹೆವು ನಾವು….

ನಮ್ಮ ನೆಲ ಚಂದನದ ಕಂಪಿನದು
ನಮ್ಮ ಹೊಲ ಹಸುರುಮಯ ಸೊಂಪಿನದು
ಶಾಂತಿದೂತರ, ಕ್ರಾಂತಿವೀರರ
ನಮ್ಮಕುಲ ಇಳೆಯಲತಿ ಪೆಂಪಿನದು…

ರಣಕಹಳೆ ನಾಡಿಗಳ ಹೊಕ್ಕು ನೆತ್ತರಿನ
ಕಣಕಣದಿ ಹೊಸ ಬಿರುಸನಿತ್ತು
ಕೆಣಕುತಿದೆ ನಮ್ಮ ನೆಲದಭಿಮಾನವನಿಂದು
ಹೋಗೋಣ ಬನ್ನಿ, ಮಾತೆಯ ಮಾನ ಉಳಿಸೋಣ

ಭಾರತಾಂಬೆಯ ವೀರ ಪುತ್ರರು
ಮೇರುಗಿರಿಯ ಹಿಮಖಂಡದಲಿ
ನೆತ್ತರಿನ ಕುಯಿಲು ಹರಿಸುತಿರೆ
ಭೀತರಾಗದೆ ನಾವು ನೆಗೆಯೋಣ, ಬಗೆಯೋಣ….

ಹೊನ್ನು ಮಣ್ಣಿನ ಕಲಹ ಬೇಡ ನಮಗಿಂದು
ಕುನ್ನಿಗಳ ಕೆಂಗಣ್ಣ ಕಿಡಿಯಿಹುದು ಮುಂದು
ನನ್ನಿಯಲಿ ನಮ್ಮೊಲವು
ಚಿನ್ನಿಗಳ ಕಣ್ಣುಗಳೆ ನಮಗೆ ಕುಂದು

ಇಂದು ಬನ್ನಿ ಒಂದಾಗೋಣ
ಮುಂದೆ ಎದೆಸೆಟೆದು ಸಾಗೋಣ
ಕಡೆಯುಸಿರು ಇರುವನಕ
ನೆಲದ ಬೆಲೆ ಉಳಿಸೋಣ…

(ಅಡಿಗರನ್ನು ನೆನೆದು)
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...