Home / ಕವನ / ಕವಿತೆ / ನೆಲದ ಬೆಲೆ ಉಳಿಸೋಣ

ನೆಲದ ಬೆಲೆ ಉಳಿಸೋಣ

ಅಟ್ಟೋಣ, ಮೆಟ್ಟೋಣ ಕೆಚ್ಚೆದೆಯ ಮಿಂಚಿನಲಿ
ತಟ್ಟೋಣ ದವಡೆಯನೆ ಧಾಂಡಿಗರ ಸಂಚಿನಲಿ….

ನಮ್ಮುಸಿರ ಬಿಸಿಯು ಆರುವ ಮುನ್ನ
ನಮ್ಮೆದೆಯ ಅಸುವು ನೀಗುವ ಮುನ್ನ
ನಾಡಿಗರ ಹಸಿರಕ್ತ ಬರಿದೆ ಹೋಗುವ ಮುನ್ನ
ಕ್ರೋಧದುರಿ ಮೈತಾಳಿ ನಮ್ಮನೇ ಸುಡುವ ಮುನ್ನ…
ಅಟ್ಟೋಣ ದ್ರೋಹಿಗಳ, ಮೆಟ್ಟೋಣ ಬನ್ನಿ
ಕಟ್ಟಳೆಯ ಬದಿಗಿಟ್ಟು ಉರಿವ ಬೆಂಕಿಯ ತನ್ನಿ

ನಮ್ಮಳಲು ನಮಗಿರಲಿ
ಕೆಂಪಿರುಳು ಬೇಡ
ಸ್ವಾತಂತ್ರ್ಯ ಉಳಿದಿರಲಿ
ದಾಸ್ಯದಳು ಬೇಡ….

ನಮ್ಮೂರು ಕನಸಿನ ನಾಕ
ನಮ್ಮವರು ಉಸಿರಿತ್ತು
ಸಾವನ್ನೆ ಮುತ್ತಿಟ್ಟು
ನಮಗಿತ್ತ ಸುರಲೋಕ….

ನಮ್ಮೊಡಲ ಒಡೆಯರು ನಾವು
ಒಮ್ಮನದಿ ವೈರಿಗಳ ಹೊಡೆದು
ಜೀವ-ಭಾವೈಕ್ಯದ ಸಿಡಿಲ-ಮಳೆಗರೆದು
ದೇಶಕಂಟಕರ ಕೆಡಿಸುವೆವು….. ಇಲ್ಲವೆ ಸಾವು!

ಕಾಳರಾತ್ರಿಯ ಭಯವ ತಡೆದು
ಹಾಳು ಪ್ರಭುತನದ ಬೇಡಿ ಒಡೆದು
ಹೊಸತೇಜ-ಓಜಗಳ ಮೆರಗಿಂದ
ರಸಭರಿತ ಬೀಡಕಟ್ಟಿಹೆವು ನಾವು….

ನಮ್ಮ ನೆಲ ಚಂದನದ ಕಂಪಿನದು
ನಮ್ಮ ಹೊಲ ಹಸುರುಮಯ ಸೊಂಪಿನದು
ಶಾಂತಿದೂತರ, ಕ್ರಾಂತಿವೀರರ
ನಮ್ಮಕುಲ ಇಳೆಯಲತಿ ಪೆಂಪಿನದು…

ರಣಕಹಳೆ ನಾಡಿಗಳ ಹೊಕ್ಕು ನೆತ್ತರಿನ
ಕಣಕಣದಿ ಹೊಸ ಬಿರುಸನಿತ್ತು
ಕೆಣಕುತಿದೆ ನಮ್ಮ ನೆಲದಭಿಮಾನವನಿಂದು
ಹೋಗೋಣ ಬನ್ನಿ, ಮಾತೆಯ ಮಾನ ಉಳಿಸೋಣ

ಭಾರತಾಂಬೆಯ ವೀರ ಪುತ್ರರು
ಮೇರುಗಿರಿಯ ಹಿಮಖಂಡದಲಿ
ನೆತ್ತರಿನ ಕುಯಿಲು ಹರಿಸುತಿರೆ
ಭೀತರಾಗದೆ ನಾವು ನೆಗೆಯೋಣ, ಬಗೆಯೋಣ….

ಹೊನ್ನು ಮಣ್ಣಿನ ಕಲಹ ಬೇಡ ನಮಗಿಂದು
ಕುನ್ನಿಗಳ ಕೆಂಗಣ್ಣ ಕಿಡಿಯಿಹುದು ಮುಂದು
ನನ್ನಿಯಲಿ ನಮ್ಮೊಲವು
ಚಿನ್ನಿಗಳ ಕಣ್ಣುಗಳೆ ನಮಗೆ ಕುಂದು

ಇಂದು ಬನ್ನಿ ಒಂದಾಗೋಣ
ಮುಂದೆ ಎದೆಸೆಟೆದು ಸಾಗೋಣ
ಕಡೆಯುಸಿರು ಇರುವನಕ
ನೆಲದ ಬೆಲೆ ಉಳಿಸೋಣ…

(ಅಡಿಗರನ್ನು ನೆನೆದು)
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...