Home / ಕವನ / ಕವಿತೆ / ಬಾಳ ದಿಬ್ಬಣ

ಬಾಳ ದಿಬ್ಬಣ

ಬಾಳ ದಿಬ್ಬಣವು ಹೊರಟಿಹುದು ಅಂದದಲಿ
ಗೋಳ ಜೀವನದ ವಾದ್ಯದಿಂದುಸುರುತಲಿ…
ಮುಂದೆ ಬದುಕಿನ ಸೋಗ
ಕಂಡು ಮೆರೆಯಲು ಬೇಗ

ಜೀವನದ ಬಂಡಿಯನು ಹೊಡೆಯುತಲಿ
ಜೀವಿಕೆಯ ಸುಗಮತೆಯನರಸುತಲಿ…
ಕಲ್ಲು-ಮುಳ್ಳಿನ ಹಾದಿ
ಗೆಲ್ಲು-ಸೋಲಿನ ಬೀದಿ.

ಬದುಕಿನುದ್ದಕು ಇಹುದೆಂದು
ಅದುವೆ ಜೀವನದ ಸೊಗಸೆಂದು
ಉಳಿದುಳಿದು ನುಡಿಸುತಲಿ
ಅಳವಡಿತ ಭಾವದಲಿ…

ಮುಂದಿಹುದು ಕಳೆಹೀನ ಪಥವೆಂದು
ಬಂದಿಹುದು ರಸಹೀನ ಜಗಕೆಂದು,
ಬಂಧನವು ಬಡತನದ ಹಗಲಿರುಳು ಬಿಡದೆಂದು

ಅರಿತಿದ್ದು ಕಳೆಗೊಟ್ಟು ಸಾಗುತಲಿ
ಪರಿಪರಿಯ ಗಾನವನು ಮಾಡುತಲಿ…
ಸುರುಸುರುಳಿ ಹೊರಹೊರಳಿ ರಾಗಿಸುವ ನಾಗಸರ
ತರುಗಳನು ಮೋದಿಸಿ ಪರವಶ ಪಡಿಸುತಿದೆ,

ಮರುಕಳಿಸಿ ಪದಪಿಂದ ಪಾಡಿತಿದೆ
ಕಿರುಗವನ ಮರಗಳಿಗೆ ಅರುಹುತಿದೆ
ಮರುಗಳಿಗೆ ತಡವರಿಸೆ ಗೀತಸುಧೆ…
ಹುರುಪಳಿದ ಮಧುಬನವು ನಿಡುಸುಯ್ಯುತಿದೆ…..

ಬರಸಿಡಿಲು ದಡಲೆಂದು ಬಡಿದರೂ
ಚರಚರನೆ ಮಳೆಗಾಳಿ ಸುರಿದರೂ
ಗರಬಡಿದ ದಿಬ್ಬಣವು ಸಾಗಿಹುದು, ಬಾಳ-
ಚರಮ ಸೀಮೆಯ ಕೊನೆಯಂಚನರಸುತಲಿ….

‘ಬದುಕು’-‘ಭಾಗ್ಯ’ಗಳೆಂಬ ವಧೂ-ವರರನು
ಸದಭಿಮಾನದ ಹುರುಪಿಂದ ಮುನ್ನಡೆಸುತಲಿ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...