Home / ಕವನ / ಕವಿತೆ / ಹಟಮೆಂಟ್ ಜೀವನ

ಹಟಮೆಂಟ್ ಜೀವನ

ಕೋಟಿ ಜನ ಒರಲುವರು
ನರಳುವರು, ತೆರಳುವರು
ಅವರ ಬದುಕಿನ ತಾಣ
ಅರೆಸತ್ತು ಉಳಿದ ಪ್ರಾಣ
ನಮ್ಮ ಭಾಷೆಯಲಿ ಹಟಮೆಂಟು
ನೆಮ್ಮಿರಿ, ಬಿಡಿರಿ ಸತ್ಯ ಅಲ್ಲುಂಟು….
ಹುಟ್ಟು-ಸಾವು
ಯೌವನದ ಕಾವು
ಮುದಿಯಾದ ನೋವು
ಗಳ ಸೆಳತ….ಅಲೆತಕದು ಠಾವು…..
ಅಲ್ಲಿಹುದು ಜನನ-ಮರಣದ ನಂಟು
ನಮ್ಮ ಭಾಷೆಯಲದು ಹಟಮೆಂಟು
* * * *

ಒಂದು ದಿನ ಬಂತು ಮಳೆ
ಅದರ ಹಿಂದೆ ಹೊಳೆ
ಮಳೆ ಒಳಗು-ಹೊರಗೂ
ಹೊಳೆಗೆಲ್ಲ ಕೊಚ್ಚಿ ಹೋಗುವವರೆಗೂ
ಗುಡುಗು ಮಿಂಚಿನ ಸೆಳೆತ
ಗಾಳಿ-ಗೋಳಿನ ಹೊಡೆತ
ಬಿದಿರು ಮಳೆ ದೀಪದಲೆ ಎಲ್ಲುಂಟು?
ನಮ್ಮ ಭಾಷೆಯಲದು ಹಟಮೆಂಟು
* * * *

ಚಳಿ ಬಂತು…. ಚಳಿ
ಇಲ್ಲ ಕಂಬಳಿ
ಒಲೆ ಇಹುದು ಬಳಿ
ಅದಕ್ಕಿಲ್ಲ ಎಲಿ
ನಡುಕ……ಕಂಪನ
ಹೃದಯ ಸ್ಥಂಬನ
ಎಳೆಜೀವ ಒಣ…….ಒಣ…
ಬಾಳೆಲ್ಲ ಬಣ ಬಣ

ಚಳಿಗೆ ಸಾವಿನ ಗಂಟು
ಮನೆಯಲ್ಲ ಅದು ಹಟಮೆಂಟು!

ಬಿಸಿಲು….ಬೆವರು
ಬೇಗೆ…ದಗೆ, ಹೊಗೆ.
ಕಾದು ಉರಿವ ನೆಲ……ಇಲ್ಲ ನೀರು
ಇದರೊಳಗು ಬಿಸಿಯುಸಿರು
ಬಿಡುವ ಬಗೆ!

ಪತ್ರದ ಛತ್ರ….
ಬರಿ ಮೈ…..ಇಲ್ಲ ವಸ್ತ್ರ
ಹಾಸಿಗೆ ನೆಲ, ಹೊದಿಕೆ ಇಬ್ಬನಿ ಜಲ
ಬಡತನ ಅವರ ಕೊಲ್ಲುವ ಅಸ್ತ್ರ

ಅನ್ನ ಎನುತ ಹಲುಬುವರು
ಬಡಕಲು ಕಾಯ
ಇರುವನಕ ಬದುಕುವ ಧ್ಯೇಯ
ಬಲವಿಲ್ಲ ಕೈಕಾಲು, ಮೈಗೆ
ನಡೆದಂತೆ ದಾರಿಯಲಿ ಹೊಯ್ಗೆ….

ಇದರೊಳಗು ನೆಲನಮ್ಮ
ಸಿಲುಕಿಹುದು ಹುಲಿಯ ಬಾಯ್ಗೆ
ಮನವಿಡಿ, ತನುಕೊಡಿ, ರಕ್ತ ನೀಡಿ
ರಕ್ಷಣೆಯ ಹೊರೆ ನಿಮ್ಮ ಕೈಗೆ

ಎಂದಿಂತು ಸ್ವರ ಎತ್ತಿ, ಕರ ಎತ್ತಿ
ಅರಚುವರು ಶ್ವೇತಮತಿಗಳು……ನಾಯಕರು

ಕಾಲ ಓಟಿನ ಬಂತು
ಕಾರು ಇತ್ತಲೂ ಬಂತು

“ನಿಮ್ಮ ಹಿತ ನಮ್ಮ ಮತ
ನಿಮಗೆಂದೆ, ನಿಮ್ಮ ಸುಖಕೆಂದೆ
ಹಿಡಿದಿಹೆವು ಇಂದು ವ್ರತ
ಇರಲೇಳಿ ನಮಗೊಂದು ನಿಮ್ಮ ಮತ…..

ಓಟು ಮುಗಿಯಲು
ವ್ರತವೂ ಮುಗಿವುದು
ಅವರಲ್ಲೆ, ಅವರು ವ್ಯರ್ಥ
ಪುಸಿವರು…ಅದಕಿಲ್ಲ ಮಿತ

ಇದು ವಿಧಿಯ ಕಾಂಪ್ಲಿಮೆಂಟು
ಮನೆಯಲ್ಲ ಅದು ಹಟಮೆಂಟು
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...