ರಾಷ್ಟ್ರಪಿತ

ನಿನ್ನ ಎದೆಗೆ ಗುಂಡು ಬಡಿದಾಗ
ಮಣ್ಣು ನಡುಗಿತು ಹಗಲಹೂ ಬಾಡಿತು
ಶಾಂತಿದೂತ ಪಾರಿವಾಳ ಗೂಡು ಸೇರಿತು.

ತಿಳಿವು ತುಂಬಿದ ಕಣ್ಣು ಒಲವು ತುಂಬಿದ ಹೃದಯ
ಛಲವನರಿಯದ ಬದುಕು ಸಾಕು ಇಷ್ಟೇ
ನೆಲವು ನಂದನವಾಗಲಿಕ್ಕೆ
ಮನುಕುಲದ ಇತಿಹಾಸ ರಕ್ತರಂಜಿತ.

ಸರಳತೆ ಸಾಕಾರವಾಯಿತು
ಮಮತೆ ಮೈದೋರಿತು
ಕಾಳಸರ್ಪದ ಹಗೆ ಪಳಗಿಸುವ ಸಲುಗೆ
ಹಾಲಾಹಲ ಕೋಲಾಹಲದ ನಡುವೆ
ಮಂದಹಾಸವು ಬೀರುತ ನಡೆದೆ.

ಬತ್ತಿದ ಮನಗಳಲ್ಲಿ ಅರಿವು ಚಿಮ್ಮುತ್ತ
ಶಾಂತಿ ಸಂದಾನ ಸಮರಸಕೆ ನಾಂದಿ
ಸಂಕೋಲೆಯ ಬಿಡುಗಡೆ ಗಂಟೆ ಮೊಳಗುತ್ತಿತ್ತು.

ನರನ ಮೃಗತ್ವ ಬಾಯಿ ತೆರೆದಿತ್ತು
ನಿನ್ನ ಬಲಿಗೆ ಮಾತೃ ಮನಗಳು ಮರುಗಿದವು
ಕರಳು ಬಳ್ಳಿಗಳು ಕೊರಗಿದವು
ಇದೆಂಥ ಬಲಿ… ಸಾವು… ಹತ್ಯೆ…
ಇನ್ನೆಷ್ಟು??
ಬಾನು… ಭೂಮಿ ಗುಡುಗಿತು.

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಂತರಗಟ್ಟೆವ್ವ (ಬೀದಿ ನಾಟಕದ ಹಾಡು)
Next post ಬೆಟ್ಟಗಳ ನಡುವಲಿ

ಸಣ್ಣ ಕತೆ

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

cheap jordans|wholesale air max|wholesale jordans|wholesale jewelry|wholesale jerseys