Home / ಕವನ / ಕವಿತೆ / ಸೋದರಿ

ಸೋದರಿ

ಸೋದರಿಯು ಇವಳೆನ್ನ
ಅದರಿಸಿ ಬರಿಸಿ, ಹರಸಿ,
ಸೋದರನ ತನು-ಮನವು ರೋಸಿಹೋಗುವ ಮುನ್ನ

ಬಾಳಿನಲೆಮ್ಮ ಬಿರುಗಾಳಿ ಬಂದಿತ್ತು
ಸೋಲು ಅಡಿಗಡಿಗೆ ಕಾಲಿರಿಸಿತ್ತು.
ಗೇಲು ಎಲ್ಲಿಯೊ ಕಾಲು ಕಿತ್ತಿತ್ತು.

ಅಂದು ಜೀವನದ ಮಾಮರದ ಅಡಿಯೇಳತಿತ್ತು.
ತಂದೆ ಸಾವಿಗೆ ಸಿಲುಕಿ – ಉಸಿರು ನಡುಗುತಿತ್ತು
ಮುಂದೆ ಶಯ್ಯೆಯ ತಂಗಿ, ಹೃದಯ ಮೊರೆಯಿಡುತಿತ್ತು

ಬಾಲಕಾಲದ ಬಾಲ ವಿಹಾರ
ಕಾಲ ಕಾಲಕೆ ತಿಂದುಂಡು ನಲಿವ ಹೂಹಾರ
ಹಾಲಿನಂದದಿ ಬರಿದೆ ಚೆಲ್ಲಿ ಹೋಗಿತ್ತು.

ತಾಯ ಕರುಳಿನ ಕರೆಯೆ ಕೇಳದಂತಿತ್ತು
ಮಾಯಗೊಂಡಿತ್ತು ಮಮತೆ,
ಬಾಯ ನಲ್ವಾತು ದೂರ ಓಡಿತ್ತು.

ಕಂಬನಿಯ ಚುಂಬನದ ಬದುಕು
ಮುಂಬನಿಯ ಅಭಿಷೇಕ ಅದಕು,
ಅಂಜಿಸುವ ಅಪವಾದ; ಹಿಂಜಿಸುವ ಅಳುಕು

ಹೃದಯ ಮರುಗಿತ್ತು ಕರಗಿತ್ತು ಎನ್ನ
ಅಧರ ನಡುಗಿತ್ತು. ಬಿರಿದಿತ್ತು ಸಿರಿವೆಣ್ಣ
ಸೋದರಿಯು ಮರೆಯದಿರಿ ಇವಳೆನ್ನ…..

ಒಂದಿಗೆಯೆ ಕೆಲ ಕಾಲ ಕಳೆದೆವು
ನಂಬಿಗೆಯ ಕಣ್ಗಳಲಿ ಮೆರೆದೆವು
ಇಂದಿಗದು ಮುಗಿದಿತು, ಮುಂದಿನದ ತಿಳಿಯೆವು!

ಹಾಳು ಈ ಜಗವು
ಹಾಳು ಇಲ್ಲಿಯ ರೀತಿ
ಗೋಳು ಹೊಯ್ಯವರು ತನ್ನವರು ಇಲ್ಲಿಲ್ಲ ಪ್ರೀತಿ

ನೋವ ಮಾಡದಿರಿ ಮನಕೆ
ಜೀವ ದಣಿಸದಿರಿ,
ಹೂವಿನಂದದಿ ಸಲಹಿ ವ್ಯಥೆಯನಳಿಸಿ

……ಹೋಗವ್ವ ನಲ್ದಾಯಿ
ಭಾಗ್ಯ ಲಕ್ಷ್ಮಿಯೆ, ಪತಿ ಮನೆಗೆ
ಯೋಗ್ಯರವರಿನ್ನು ತಾಯ್ತಂದೆ ನಿನಗೆ!

ಕಂಬನಿಯೆ ಸುರಿಯದಿರು
ಇಂದಿನಿತೆ ಸಾಕು, ಹರಿಯದಿರು,
ತಂಗಿ ಇವಳೆನ್ನ ಮರೆಯದಿರು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...