Home / ಕವನ / ಕವಿತೆ / ಮಂದಸ್ಮಿತ

ಮಂದಸ್ಮಿತ

ಗೊಂಚಲಲಿ ಹೂವೊಂದು ನಸುನಗುತಲಿತ್ತು
ಹಂತದಲ್ಲಿ ಸ್ಮಿತವನ್ನು ಇಡಲು ಬಯಸಿತ್ತು.

ಆ ಹೂವ ಹೊಂಬಣ್ಣ
ಆ ಹೂವ ಕಂಪನ್ನ –

ನೋಡಿತೈ ಬೆಡಗದರ ದೂರಿದ್ದ ಭ್ರಮರ,
ಕಾಡಿತ್ಯೆ ಬಳಿ ಬರಲು ಅತಿ ಆಶೆ ಅದರ.

ನಸುನಗುವ ವದನವನು
ತುಸು ಬಿರಿದ ಅಧರವನು

ನಯವಾದ ಗಲ್ಲವನು
ನಯಕಾಂತ ನಾಯನವನು

ರಸ ಭರಿತ ಸವಿಯನ್ನು
ಬೆಸಗೊಂಡ ಭಾವವನು

ಹೀರಳೆಳಸಿತು ತುಂಬಿ,
ಕ್ಷುದ್ರವಾಗಿಹ ಆಶೆದುಂಬಿ;

ಮೋಹಗೊಂಡಿತು ಬವರ
ಲೋಹ ಹೊಂದಿತು ಹೃದಯದರ

ಅತಿ ಮಧುರ, ಅತಿ ಕೋಮಲ ಹೂವ ಬಳಿ
ಅತಿ ಚಂಚಲ ತುಂಬಿಯಾಶೆಯ ಸುಳಿ…..

ಯವ್ವನದ ವೇಳೆಯದು,
ಜವ್ವನೆಯು ಆಶೆ ವಧು

ಝಂಕರನ ಇನಿದನಿಯು
ಇಂಪಾಗಿ ಕೇಳಿದುದು

ಪ್ರಕೃತಿಯ ನಿಜ ಬಯಕೆ
ಸುಕೃತಿಯ ಪ್ರಣಯದಕೆ

ಅನುಭವಿಸಬೇಕೆಂಬ
ತನುವಾಶೆಯುಂಟಾದುದು

ಅದರವನ್ನಾಶಿಸುವಗೆ
ಸಾಧರವನ್ನೀಯೆ ಮಿಗೆ –

ಪ್ರಣಯದುಯ್ಯಾಲೆಯಲಿ ತೂಗಿದುವು
ಕ್ಷಣ ಮಾತ್ರ, ಮರುಚಣವೆ ಮರುಗಿದುವು….

ಬಳಿಯಿದ್ದ ಹೂವೊಂದು ‘ಖುಳ್ಳೆಂ’ ದಿತು!
ಸುಳಿವನ್ನು ತಿಳಿದಾಗ ಹೂವು ನೊಂದಿತು

ರಸಹೀನ ಬಾಳೆಂದು ಬೇಸತ್ತು, ವಿ-
ರಸಗೊಂಡು, ಅದು ಅಲ್ಲೆ ಮುದುಡಿತು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...