ಮುಂಬಯಿ ಬದುಕು

ಹಾಳು ಬೀದಿ ಬಸದಿಯಲಿ
ಗೋಳು ಕ್ಷಯ ಹಿಡಿದ
ಬಾಳಿಗೆ ದೊಂಗಾಲು ಬಿದ್ದು
ಕ್ರಿಮಿಗಳೋಪಾದಿ ಕೊಳೆವ
ನರ ನಾರಾಯಣರ ಬಾಳು
ಬಾಳೆ? ನೋಡಿರೈ ಅವರ

ಜೀವಂತ ಮರಣ
ಗುರಿರಹಿತ ಪಯಣ
ಉದಾಸೀನ ನಯನ, ನಿಶ್ಯಕ್ತ ಹರಣ
ಜೀವನದ ಅಲೆದಾಟ
ರೇಗಾಟ, ಕೂಗಾಟ, ನಿಜವನ್ನೆ ಸುಳಿವಾಟ

ಹರಕಲು ಗೇಹ
ಬಡಕಲು ದೇಹ
ನರಕ ಅದು, ಅಲ್ಲಿಲ್ಲ ನೇಹ!

ಹದಿಬದೆಯ ವ್ಯಾಪಾರ
ಅದರೊಳಗು ತಕರಾರ
ಕುಲ ಲಜ್ಜೆಗಳ ಮಾರಿ ತಾಯ್ತನದ ವ್ಯಭಿಚಾರ –
ಒಣದಾದ ತುಟಿಯಲ್ಲಿ
ಹಿರಿದಾದ ಮೇಲುನಗೆ
ತೆಳ್ಳನೆಯ ಉಸಿರು
ಬಡತನದ ಹೊಗೆ-ಧಗೆ
ಕಣ್ಣು ಕಾಂತಿ ಹೀನ
ಬಯಕೆಗಳ ಬಹುಬಗೆ –
ಗಿರಿಣಿಗಳ ಎಡೆಯಲ್ಲಿ
ಜಜ್ಜಿರುವ ನರರು
ಮೈರುಧಿರ ಬೆವರೆಂದು
ಸುರಿಸುವರು ಅವರು
ಅವರ ಸುಖ-ಅಳು
ಅದಕ್ಕೆಲ್ಲ ಹೆರರು –

ದಣಿದ ದೇಹಕೆ ಸುಖದ ಮೋಹ
ಉಸ್ಸೆನಲು ಓಡುವುದು ಗುಡಿಯೆಡೆಗೆ
ಬಹುದೂರ ಮನೆ
ಉದ್ದ ದಾರಿ ಅದಕಿಲ್ಲ ಕೊನೆ
ಮನದ ಕಿರುಕುಳ-ತಾಪ
ಮನೆಯಲ್ಲ ಅದು ಒಂದು ಕೂಪ

ಬರಿಹೊಟ್ಟೆ ಅರೆನಗ್ನ
ಅರೆಜೀವ ಕೂಸು
ನೂರು ಬಣ್ಣವ ಬಳಿಯೆ
ಕೈಲಿಲ್ಲ ಕಾಸು

ಕಂದಿ ಕಮರಿದ ಎಳೆ ಜೀವಗಳ
ಮೇಲೆ ನಾಡು ಕಟ್ಟಿಹದು ಕನಸು!
ವಯೋವೃದ್ದ ಹೆಗಲಲ್ಲಿ
ಬಡತನದ ಭಾರ
ನೆರೆಬಿದ್ದ ಹಣೆಯಲ್ಲಿ
ವಿವಶತೆಯ ಸಾರ
ನಿಡಿದುಸಿರ ಎಡೆಯಲ್ಲಿ
ಸಾವೆಷ್ಟು ದೂರ!
ಬರೆ ಎಳೆದ ಕಾಯ
ನರ-ನಾಡಿ ಗಾಯ
ತಿಕ್ಕಾಟ ಮನದಲ್ಲಿ
ಕದಡಿರುವ ಧ್ಯೇಯ
ಜಗವಲ್ಲ, ಇದು ಒಂದು
ವಿಧಿ ಬಗೆದ ಹೇಯ!

ಯೌವನಕೆ ಬೆಲೆಯಿಲ್ಲ
ಬರಿದೆ ಹೋಹುದು ತಡವರಿಸಿ
ಬವಣೆಯಲಿ ಬದುಕೆಲ್ಲ
ಬೆಳಕು-ಇದೆ ಸತ್ಯ-ಇದೆ
ಪುಲಿಯ ಬಳಿಯಲಿ ಹಸುವಂತೆ
ಶೌರ್‍ಯ ಸಹನೆಯ ಬಲವಿಲ್ಲ

ಬಲಹೀನ ಕೈಯಿಂದ
ಕಾತರದ ಕಣ್ಣಿಂದ
ಛಲಹೀನ ಒಲವನ್ನು
ಆತುರದ ಸೆಳವಿಂದ
ಬಯಸುತಿದೆ ಹಸುಗೂಸು
ದಯಾದಾನಿವರರಿಂದ…..

ಅರೆ! ದೂರಿದ್ದವರೆ,
ಬಳಿ ಬಂದು ನೋಡಿ
ನಿರ್ಜಿವ ನರರಿಂಗೆ
ಜೀವದಾನವ ಮಾಡಿ
ಉಳಿಸೋಣ ನಾಡನ್ನು
ನಾವೆಲ್ಲ ಕೂಡಿ…..!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಳಗಿಸು ಬಾ ಶುಭ ಆರತಿ
Next post ಮೌನ ತಪವದಾರದೋ? ಸಿದ್ದಿ ಯಾರಿಗೋ?

ಸಣ್ಣ ಕತೆ

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

cheap jordans|wholesale air max|wholesale jordans|wholesale jewelry|wholesale jerseys