Home / ಕವನ / ಕವಿತೆ / ಮುಂಬಯಿ ಬದುಕು

ಮುಂಬಯಿ ಬದುಕು

ಹಾಳು ಬೀದಿ ಬಸದಿಯಲಿ
ಗೋಳು ಕ್ಷಯ ಹಿಡಿದ
ಬಾಳಿಗೆ ದೊಂಗಾಲು ಬಿದ್ದು
ಕ್ರಿಮಿಗಳೋಪಾದಿ ಕೊಳೆವ
ನರ ನಾರಾಯಣರ ಬಾಳು
ಬಾಳೆ? ನೋಡಿರೈ ಅವರ

ಜೀವಂತ ಮರಣ
ಗುರಿರಹಿತ ಪಯಣ
ಉದಾಸೀನ ನಯನ, ನಿಶ್ಯಕ್ತ ಹರಣ
ಜೀವನದ ಅಲೆದಾಟ
ರೇಗಾಟ, ಕೂಗಾಟ, ನಿಜವನ್ನೆ ಸುಳಿವಾಟ

ಹರಕಲು ಗೇಹ
ಬಡಕಲು ದೇಹ
ನರಕ ಅದು, ಅಲ್ಲಿಲ್ಲ ನೇಹ!

ಹದಿಬದೆಯ ವ್ಯಾಪಾರ
ಅದರೊಳಗು ತಕರಾರ
ಕುಲ ಲಜ್ಜೆಗಳ ಮಾರಿ ತಾಯ್ತನದ ವ್ಯಭಿಚಾರ –
ಒಣದಾದ ತುಟಿಯಲ್ಲಿ
ಹಿರಿದಾದ ಮೇಲುನಗೆ
ತೆಳ್ಳನೆಯ ಉಸಿರು
ಬಡತನದ ಹೊಗೆ-ಧಗೆ
ಕಣ್ಣು ಕಾಂತಿ ಹೀನ
ಬಯಕೆಗಳ ಬಹುಬಗೆ –
ಗಿರಿಣಿಗಳ ಎಡೆಯಲ್ಲಿ
ಜಜ್ಜಿರುವ ನರರು
ಮೈರುಧಿರ ಬೆವರೆಂದು
ಸುರಿಸುವರು ಅವರು
ಅವರ ಸುಖ-ಅಳು
ಅದಕ್ಕೆಲ್ಲ ಹೆರರು –

ದಣಿದ ದೇಹಕೆ ಸುಖದ ಮೋಹ
ಉಸ್ಸೆನಲು ಓಡುವುದು ಗುಡಿಯೆಡೆಗೆ
ಬಹುದೂರ ಮನೆ
ಉದ್ದ ದಾರಿ ಅದಕಿಲ್ಲ ಕೊನೆ
ಮನದ ಕಿರುಕುಳ-ತಾಪ
ಮನೆಯಲ್ಲ ಅದು ಒಂದು ಕೂಪ

ಬರಿಹೊಟ್ಟೆ ಅರೆನಗ್ನ
ಅರೆಜೀವ ಕೂಸು
ನೂರು ಬಣ್ಣವ ಬಳಿಯೆ
ಕೈಲಿಲ್ಲ ಕಾಸು

ಕಂದಿ ಕಮರಿದ ಎಳೆ ಜೀವಗಳ
ಮೇಲೆ ನಾಡು ಕಟ್ಟಿಹದು ಕನಸು!
ವಯೋವೃದ್ದ ಹೆಗಲಲ್ಲಿ
ಬಡತನದ ಭಾರ
ನೆರೆಬಿದ್ದ ಹಣೆಯಲ್ಲಿ
ವಿವಶತೆಯ ಸಾರ
ನಿಡಿದುಸಿರ ಎಡೆಯಲ್ಲಿ
ಸಾವೆಷ್ಟು ದೂರ!
ಬರೆ ಎಳೆದ ಕಾಯ
ನರ-ನಾಡಿ ಗಾಯ
ತಿಕ್ಕಾಟ ಮನದಲ್ಲಿ
ಕದಡಿರುವ ಧ್ಯೇಯ
ಜಗವಲ್ಲ, ಇದು ಒಂದು
ವಿಧಿ ಬಗೆದ ಹೇಯ!

ಯೌವನಕೆ ಬೆಲೆಯಿಲ್ಲ
ಬರಿದೆ ಹೋಹುದು ತಡವರಿಸಿ
ಬವಣೆಯಲಿ ಬದುಕೆಲ್ಲ
ಬೆಳಕು-ಇದೆ ಸತ್ಯ-ಇದೆ
ಪುಲಿಯ ಬಳಿಯಲಿ ಹಸುವಂತೆ
ಶೌರ್‍ಯ ಸಹನೆಯ ಬಲವಿಲ್ಲ

ಬಲಹೀನ ಕೈಯಿಂದ
ಕಾತರದ ಕಣ್ಣಿಂದ
ಛಲಹೀನ ಒಲವನ್ನು
ಆತುರದ ಸೆಳವಿಂದ
ಬಯಸುತಿದೆ ಹಸುಗೂಸು
ದಯಾದಾನಿವರರಿಂದ…..

ಅರೆ! ದೂರಿದ್ದವರೆ,
ಬಳಿ ಬಂದು ನೋಡಿ
ನಿರ್ಜಿವ ನರರಿಂಗೆ
ಜೀವದಾನವ ಮಾಡಿ
ಉಳಿಸೋಣ ನಾಡನ್ನು
ನಾವೆಲ್ಲ ಕೂಡಿ…..!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...