ಹಣತೆಯ ಕೊರಗು…..

ಹಚ್ಚಿಟ್ಟ ಹಣತೆ ಆರಿ ಹೋಗುವುದು
ಗಾಳಿಯ ಸೋಂಕಿಗೆ
ಉಸಿರಿನ ಉಫ್‌ಗೆ
ನೀರೆಯರ ಸೀರೆಯಂಚಿನ ಸ್ಪರ್ಶಕೆ
ದಾರಿದೀಪವಾಗುವ ಹಮ್ಮನು
ಬಿಟ್ಟು ಬಯಲಾದಾಗ
ನಾನು ಉರಿದು ಬೂದಿಯಾಗುತ್ತೇನೆ
‘ಹಚ್ಚೇವು ಕನ್ನಡದ ದೀಪ’
ಎಂಬ ಹಾಡನ್ನು ಕೇಳುತ್ತ
ಕ್ಷಣದಷ್ಟು ತಮದ ಅಲೆಯನು
ಸರಿಸಿ ಬಾರಿದಿಸಿತು ಅಲೆಯನು
ನನ್ನ ಒಳಗಿನ ಉರಿ
ನನ್ನ ದುರ್ಗತಿಗೆ ಮೊರೆಯಿಡುತ್ತದೆ
ಅಲ್ಪ ಅಸ್ಮಿತೆಯ ಚಿತ್ವವನು
ಕಣ್ಣೆದುರು ತಂದಿಡುವಾಗ
ನೋವು ಭಯವಾಗುತ್ತದೆ.

ಅವನ ಮಧುರ ಮಿಲನದ
ಬಯಕೆ ಹೊತ್ತು ಉರಿದು
ಬೆಳಕ ತೋರುವ ಭ್ರಮೆ
ನಿರಸನವಾಗುತ್ತದೆ.
ನನ್ನ ಆರಿಹೋಗುವಿಕೆಯೆ
ಒಂದು ದುರಂತ!

ನಾನು ಆಶೆ ಉತ್ಸಾಹಗಳ ಪುಂಜ
ಪ್ರೇಮಿಗಳ ಮಿಲನದ
ಜ್ಞಾನದಾಹಗಳ ಸಂಕೇತ..
ಮನೆ-ಮನ ಬಾಗಿಲ ದಂಡೆಯಲಿ
ದೇಗುಲದ ದೇವರ ಅಂಗಳದಲಿ
ಉತ್ಸವದ ದೀಪಗಳ ಸಾಲಿನಲಿ
ಸೊಗಸಾಗಿ ಅಂದವಾಗಿ ಮಿಣುಕುತ್ತ
ಗುಂಪಿನ ಬೆಳಕಿನಲಿ ಪಯಣಿಗರ
ಪಥ ದರ್ಶನ ಮಾಡುತ್ತೇನೆಂಬ
ಹೆಮ್ಮೆಯ ಹೊತ್ತು ಇಂಬಿಟ್ಟು
ಹೊಸೆದ ಮನಸುಗಳ
ನಂಬಿಸಿ, ಹುರಿದುಂಬಿಸಿ
ಜೀವಂತವಾಗಿರುವಾಗ
ಎದುರಾಗುವ ಮಂಡೆಲರ ತೊಡಕು
ಕಂಪನ ಹುಚ್ಚಿಸಿ
ಆರುವ ಭಯವನ್ನೆ ಹುಟ್ಟಿಸುತ್ತದಲ್ಲ!
ಎಂದಿನವರೆಗೆ ನಿಮ್ಮ ಮನೆಯ ಬೆಳಗಲಿ?
ನಿಮ್ಮಾಶೆಗಳಿಗೆ ಬಲವಾಗಿ, ಫಲವಾಗಿ
ಎಷ್ಟು ಉರಿಯಲಿ….

ನಾನು ಪಮದಲ್ಲೊಂದು
ಮಿಣುಕುಹುಳ
ಕ್ಷಣಭಂಗುರ ನನ್ನ ಅಸ್ಮಿತೆ
ಆದರೆ ನಾನೊಂದು ಅನಲ ಕಣ
ಅನುಕೂಲ ಪವನ ಬಲದಿಂದ
ಆಕಾಶಕ್ಕೆ ಹಾರಿ, ಅಂಬರವನು ಸುಡಬಲ್ಲೆ
ಪ್ರಿಯೆಯ ಪ್ರೇಮ ಕತೆಗೆ
ನಾಂದಿಯಾಗಿಯೂ, ಮುಳುವಾಗಬಲ್ಲೆ
ಕಣ ಒಂದೆ ಸಾಕು
ಮನೆ ಸುಡಲು, ಮನ ಸುಡಲು

ಸುಂದರ ಕನಕತುಲ್ಯ
ಬೆಳಕಿನಿಂದ ನಾವೆಲ್ಲರ ಮನ
ಸೂರೆಗೊಂಡರೂ
ಭಯಂಕರ ಬೆಂಕಿಯ ಉಂಡೆ,
ಸುಡುವ ಕಾರ್ಯದ ನಾನು
ಯಾರಿಗೂ ದಾರಿದೀಪವಾಗಲಾರೆನು
ನಿಮ್ಮ ವಿಶ್ವಾಸಕ್ಕೆ ಪ್ರೇಮಕೆ
ಪಾತ್ರನಲ್ಲ……!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಲುಗುವ ಹೂವು
Next post ಸಾ ಎಂದೊಡದು ಸ್ವರ್ಗಕ್ಕೆ ಸರಣಿ ಮೆಟ್ಟಿಲಾಗದೇ?

ಸಣ್ಣ ಕತೆ

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…