Home / ಕವನ / ಕವಿತೆ / ಹಣತೆಯ ಕೊರಗು…..

ಹಣತೆಯ ಕೊರಗು…..

ಹಚ್ಚಿಟ್ಟ ಹಣತೆ ಆರಿ ಹೋಗುವುದು
ಗಾಳಿಯ ಸೋಂಕಿಗೆ
ಉಸಿರಿನ ಉಫ್‌ಗೆ
ನೀರೆಯರ ಸೀರೆಯಂಚಿನ ಸ್ಪರ್ಶಕೆ
ದಾರಿದೀಪವಾಗುವ ಹಮ್ಮನು
ಬಿಟ್ಟು ಬಯಲಾದಾಗ
ನಾನು ಉರಿದು ಬೂದಿಯಾಗುತ್ತೇನೆ
‘ಹಚ್ಚೇವು ಕನ್ನಡದ ದೀಪ’
ಎಂಬ ಹಾಡನ್ನು ಕೇಳುತ್ತ
ಕ್ಷಣದಷ್ಟು ತಮದ ಅಲೆಯನು
ಸರಿಸಿ ಬಾರಿದಿಸಿತು ಅಲೆಯನು
ನನ್ನ ಒಳಗಿನ ಉರಿ
ನನ್ನ ದುರ್ಗತಿಗೆ ಮೊರೆಯಿಡುತ್ತದೆ
ಅಲ್ಪ ಅಸ್ಮಿತೆಯ ಚಿತ್ವವನು
ಕಣ್ಣೆದುರು ತಂದಿಡುವಾಗ
ನೋವು ಭಯವಾಗುತ್ತದೆ.

ಅವನ ಮಧುರ ಮಿಲನದ
ಬಯಕೆ ಹೊತ್ತು ಉರಿದು
ಬೆಳಕ ತೋರುವ ಭ್ರಮೆ
ನಿರಸನವಾಗುತ್ತದೆ.
ನನ್ನ ಆರಿಹೋಗುವಿಕೆಯೆ
ಒಂದು ದುರಂತ!

ನಾನು ಆಶೆ ಉತ್ಸಾಹಗಳ ಪುಂಜ
ಪ್ರೇಮಿಗಳ ಮಿಲನದ
ಜ್ಞಾನದಾಹಗಳ ಸಂಕೇತ..
ಮನೆ-ಮನ ಬಾಗಿಲ ದಂಡೆಯಲಿ
ದೇಗುಲದ ದೇವರ ಅಂಗಳದಲಿ
ಉತ್ಸವದ ದೀಪಗಳ ಸಾಲಿನಲಿ
ಸೊಗಸಾಗಿ ಅಂದವಾಗಿ ಮಿಣುಕುತ್ತ
ಗುಂಪಿನ ಬೆಳಕಿನಲಿ ಪಯಣಿಗರ
ಪಥ ದರ್ಶನ ಮಾಡುತ್ತೇನೆಂಬ
ಹೆಮ್ಮೆಯ ಹೊತ್ತು ಇಂಬಿಟ್ಟು
ಹೊಸೆದ ಮನಸುಗಳ
ನಂಬಿಸಿ, ಹುರಿದುಂಬಿಸಿ
ಜೀವಂತವಾಗಿರುವಾಗ
ಎದುರಾಗುವ ಮಂಡೆಲರ ತೊಡಕು
ಕಂಪನ ಹುಚ್ಚಿಸಿ
ಆರುವ ಭಯವನ್ನೆ ಹುಟ್ಟಿಸುತ್ತದಲ್ಲ!
ಎಂದಿನವರೆಗೆ ನಿಮ್ಮ ಮನೆಯ ಬೆಳಗಲಿ?
ನಿಮ್ಮಾಶೆಗಳಿಗೆ ಬಲವಾಗಿ, ಫಲವಾಗಿ
ಎಷ್ಟು ಉರಿಯಲಿ….

ನಾನು ಪಮದಲ್ಲೊಂದು
ಮಿಣುಕುಹುಳ
ಕ್ಷಣಭಂಗುರ ನನ್ನ ಅಸ್ಮಿತೆ
ಆದರೆ ನಾನೊಂದು ಅನಲ ಕಣ
ಅನುಕೂಲ ಪವನ ಬಲದಿಂದ
ಆಕಾಶಕ್ಕೆ ಹಾರಿ, ಅಂಬರವನು ಸುಡಬಲ್ಲೆ
ಪ್ರಿಯೆಯ ಪ್ರೇಮ ಕತೆಗೆ
ನಾಂದಿಯಾಗಿಯೂ, ಮುಳುವಾಗಬಲ್ಲೆ
ಕಣ ಒಂದೆ ಸಾಕು
ಮನೆ ಸುಡಲು, ಮನ ಸುಡಲು

ಸುಂದರ ಕನಕತುಲ್ಯ
ಬೆಳಕಿನಿಂದ ನಾವೆಲ್ಲರ ಮನ
ಸೂರೆಗೊಂಡರೂ
ಭಯಂಕರ ಬೆಂಕಿಯ ಉಂಡೆ,
ಸುಡುವ ಕಾರ್ಯದ ನಾನು
ಯಾರಿಗೂ ದಾರಿದೀಪವಾಗಲಾರೆನು
ನಿಮ್ಮ ವಿಶ್ವಾಸಕ್ಕೆ ಪ್ರೇಮಕೆ
ಪಾತ್ರನಲ್ಲ……!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...