Home / ಕವನ / ಅನುವಾದ / ನೇಹದಿ ಕೊನರುವುದು ಕೊರಡು

ನೇಹದಿ ಕೊನರುವುದು ಕೊರಡು

ಮಿತ್ರನಾಗಲಿ ಶತ್ರುವಾಗಲಿ
ಗುರುತಿನವನಾಗಲಿ, ಗುರುತಿಲ್ಲದವನಾಗಲಿ
ದೊಡ್ಡವನೆಂದು ತಿಳಿದವನ
ಬಡವನೆಂದು ಒಪ್ಪದವನ
ಮೇಲೆ
ಯಾವದೇ ಕಾರಣದಿಂದ
ಅಪಯಶದ ಧೂಳು ಹಾರಿದರೆ
ನೀನು
ಕಟುವಚನದಿಂದ ಅವನನ್ನು
ದೂರುವ ತಪ್ಪು ಮಾಡದಿರು
ಇವನು ಹಾಗೇ ಇದ್ದನೆಂದು
ನೂರಾರು ಪುರಾವೆಗಳ ಹಿಡಿದು
ಸಾಧಿಸದಿರು
ಅವನು ನಿಜವಾಗಿಯೂ ಎಡವಿ
ತಪ್ಪುದಾರಿ ಹಿಡಿದರೆ
ಕಟು ಮಾತಿನಿಂದಲ್ಲ
ಸ್ನೇಹದಿಂದ ಮಾತಾಡಿ ನೋಡು
ದೋಷ ಎಷ್ಟು ಆಳವಾದರು
ಸ್ನೇಹ ಅಲ್ಲಿ ಇಳಿಯುವುದು
ಲೋಕ ಎಷ್ಟು ಭ್ರಷ್ಟವಾದರು
ಸ್ನೇಹ ಎಲ್ಲರಿಗೆ ಹಿಡಿಸುವುದು
ಬಿದ್ದವರನ್ನು ಎಬ್ಬಿಸುವಷ್ಟು
ಪ್ರಿಯ ಕಾರ್ಯವಿಲ್ಲ
ಎತ್ತಿ ಸ್ನೇಹ ಹಂಚದ
ಕೀಳ್ತನದಷ್ಟು ಪತನ ಬೇರೆ ಇಲ್ಲ
ಸ್ನೇಹ ದೃಷ್ಟಿಯಿಂದ
ನೋಡಿದರೆ,
ಕಣ್ಣಿನ ದುನ್ಸಾಹಸ
ಮರೆಯಾಗುವುದು
ಪ್ರತಿಯೊಂದು ದುಷ್ಟತನ
ಕಂಬನಿಯಾಗಿ
ಕಪೋಲದಿಂದ ಹರಿಯುವುದು
ಆಣೆಯ ಮೇಲೆ ನಿನಗೆ
ಹೆಚ್ಚು ಮೋಹ
ಆಣೆ ಹಾಕುವ ಚಟ ಒಳಿತಲ್ಲ
ಆಣೆ ಜೊತೆಗೆ ತೊಂದರೆಯನ್ನು ತರುವುದು
ನಿನ್ನ ಮೇಲೆ ಹಾವಿಯಾಗುವುದು
ಹೊರಿಸುವೆನು ಆಣೆ ನಿನ್ನ ಮೇಲೆ ನಾನು
ಇಳಿಸಿ ಹಾಡಿ ಹರಡು
ಸ್ನೇಹದಿ ನೀನು
ಆಣೆ ನಿನಗೆ ಆ ಕರುಣಾಕರನ
ಬೆತ್ತಲೆಯಾಗಿ ಸ್ನೇಹದ
ಭಿಕ್ಷೆ ಬೇಡುವ ಭಿಕ್ಷುಕನ
ಕಟುವಾಗಿ ಒರೆಯದೆ, ಹೊರಡು
ಅಂತರ ಮನದ ನೇಹದಿ ಹೇಳು
ಕೊನರುವುದು ಕೊರಡು
*****
ಮೂಲ: ಭವಾನಿಪ್ರಸಾದ ಮಿಶ್ರ
(ಹಿಂದಿ ಅನುವಾದ ವಿಭಾಗ)

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...