ನೂರು ವರ್ಷದ ನಂತರ

ಇಂದಿನಿಂದ ನೂರು ವರ್ಷದ ನಂತರ
ನನ್ನ ಕವಿತೆಯನ್ನು ಓದುವಾತ
ನೀನು ಯಾರು..
ಹೃದಯದ ಒಲವಿನ ಲತೆಯಲ್ಲಿ
ಚಿಗುರಿರುವ ವಸಂತದ ಬೆಳಗಿನ
ಸರಳವಾದ ಸಖ್ಯವನ್ನು
ನಿನಗೆ ಮುಟ್ಟಿಸಲು ಅನುವಾದದಲ್ಲಿ
ಹೂವಿನ ಗಂಧ
ಹಕ್ಕಿಯ ಹಾಡಿನ ಛಂದ
ಇಂದಿನ ಬಣ್ಣದ ಹೊಳಪು
ನೂರು ವರ್ಷದ ನಂತರ
ನಿನಗೆ ತಲಪ ಬಹುದೆ….
ಒಮ್ಮೆ ನಿನ್ನ ಬಾಲ್ಕನಿಯ
ದಕ್ಷಿಣ ಭಾಗದ ಕಿಟಕಿಯನು ತೆರೆದು
ಉದ್ದಕ್ಕೆ ಹರಡಿರುವ
ಬಯಲನು ನಿರುಕಿಸು
ದೀರ್ಘ ಖಯಾಲಿನಲ್ಲಿ ಮುಳುಗಿ
ಜಗದ ಹೃದಯ ತಂತುವನ್ನು ಮೀಂಟಲು
ದೂರದ ಯಾವುದೋ ಸಗ್ಗದಿಂದ
ತೇಲಿ ಬರುವ ಪರಮ ಸುಖದ
ಕುರಿತು ಯೋಚಿಸು,
ನೂರು ವರ್ಷದ ನಂತರ
ತರುಣ ವಸಂತದ ದಿನದ
ಸ್ವಚ್ಛಂದ ಉತ್ಸಾಹ, ಗಲಭೆ
ಮತ್ತು
ಅರಳಿದ ಹೂವಿನ ಮತ್ತ ಕಂಪನ್ನು
ರೆಕ್ಕೆಗಳಲ್ಲಿ ಹೊತ್ತು
ಭೂಮಿಯನ್ನು ಬಣ್ಣಗೊಳಿಸಲು
ಮುನ್ನುಗ್ಗುವ ಮಲಯಾನಿಲದ
ಸುಕುಮಾರ ಸ್ಪಂದನವನ್ನು
ನೂರು ವರ್ಷದ ಮೊದಲು
ಇಂದೆ ಯೋಚಿಸು.

ಜ್ವಲಂತ ಹೃದಯದ ಹಾಡಿನಲ್ಲಿ
ತನ್ನನ್ನು ಸಂಪೂರ್ಣ ಹುದುಗಿಸಿ
ಹೂವು ಅರಳುವಂತೆ
ಕವಿ
ತನ್ನ ಮಧುರ ಪ್ರೇಮದ ಸೊತ್ತನ್ನು
ನೂರು ವರ್ಷದ ಮೊದಲ
ಒಂದು ಮುಂಜಾವಿನಲಿ
ಹಾಡಿದಂತೆ ಭ್ರಮಿಸು,
ಅದನ್ನೆ ನೂರು ವರ್ಷದ ನಂತರ
ಒಲವಿನಿಂದ ಹಾಡುವ
ಹೊಸ ಕವಿ ಯಾರು
ಅವನಿಗೆ ಹೊಸ ವಸಂತದ
ಶುಭ ಸಂದೇಶವನ್ನು
ನನ್ನ ಪರವಾಗಿ ಮುಟ್ಟಿಸು
ಎಲೆ ಕವಿಯೆ, ನನ್ನ ಹಾಡು
ನಿನ್ನ ಎದೆಯ ಬಡಿತದ ಜೊತೆಗೆ
ತುಂಬಿಯ ಗುಂಜನದಲ್ಲಿ
ಎಲೆಗಳ ಕಲರವದಲ್ಲಿ
ಅನುರಣಿಸಲಿ……
ನೂರು ವರ್ಷದ ನಂತರ!
*****
ಮೂಲ: ರವಿಂದ್ರನಾಥ ಠಾಗೋರ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಮ್ಮ ಮನೆಯ ಮಗಳು
Next post ನಡು ಬಡವಾದೊಡಲ್ಲಿಪ್ಪ ಸಿರಿತನಕೆಣೆಯುಂಟೇ?

ಸಣ್ಣ ಕತೆ

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…