Home / ಕವನ / ಅನುವಾದ / ದೇವರಿಗೆ ಬೈದೆ

ದೇವರಿಗೆ ಬೈದೆ

ಒಂದು ದಿನ
ಸಿಟ್ಟಿನ ಭರದಲ್ಲಿ
ಪರಮೇಶ್ವರನಿಗೆ ನಾನು
ತಾಯಿ ಮೇಲೆ ಬೈದೆ
ಅವನುಲೋಕಾಭಿರಾಮವಾಗಿ
ಚಕ್ಕನೆ ನಕ್ಕ
ಪಕ್ಕದ ಮನೆಯ ಬೋರ
ಮುಖವನು ಬರಿದೆ ಕುಗ್ಗಿಸಿ
ಅಂಟು ಮೋರೆಯ ಗಂಟು ಹಾಕಿ
ಸವಾಲು ಮಾಡಿದ
‘ಯಾಕಯ್ಯ ನೀನು’ ಹೀಗೆ
ಆ ನಿರ್ಗುಣ, ನಿರಾಕಾರ
ಅನಾಥ ಜಗನ್ನಾಥನಿಗೆ
ಏನಾದರೂ ಅನ್ನುತ್ತಿ
ಶಬ್ದ ಜಾಲದಲಿ ಅವನ
‘ಧರ್ಮಫಣಿಯನ್ನು ಹಿಡಿಯುತ್ತಿ’
ಇನ್ನೊಮ್ಮೆ ಬೈದೆ ಬಿಗಿಯಾಗಿ
ವಿದ್ಯಾಪೀಠದ ಗೋಡೆ ಬಿರಿಯಿತು
ಮನುಷ್ಯ ಏಕೆ ಸಿಟ್ಟಾಗುತ್ತಾನೆ?
ಈ ವಿಷಯದ ಕುರಿತು ಅಲ್ಲಿ
ಶೋಧ ನಡೆದಿದೆ.
ಹೊಗೆಬತ್ತಿಯ ಧೂಮ ತುಂಬಿದ
ಹೊಟ್ಟೆಯಲ್ಲಿ
ಭಾವವಿಹ್ವಲ ಚರ್ಚೆ ನಡೆದಿದೆ
ನನ್ನ ಹುಟ್ಟು ದಿನದಂದು
ದೇವನಿಗೆ ಇನ್ನೊಮ್ಮೆ ಬೈದೆ
ಚಾಬೂಕಿನೇಟಿನಂತೆ
ಶಬ್ದದೇಟುಗಳ ಒಂದೇ ಸವನೆ
ಬಿಗಿದು ಹೇಳಿದೆ
‘ಪಾಪಿ ಮಗನೆ’ ಮುರುಕು ಭಾಕರಿಗಾಗಿ
ಸರಕು ಕಟ್ಟಿಗೆಯ ಮುರಿಸುವೆ
ತಾಯಿ ಉಟ್ಟ ಚಿಂದಿ ಬಟ್ಟೆಯ ಚೂರಿನಿಂದ
ಬಡಕಲು ಮೈಯ ಒರಸುವೆ
ಗುಟುಕು ಸೆರೆಯ ತೃಷೆಗಾಗಿ
ಕುಂಟಣಿಯನಾಗಿಸುವೆ, ದೇವ
ಆಗದಿದು ಬಾಳಲು ನಿನಗೆ
ಅದಕಾಗಿ ಮಣ್ಣಿನಲಿ ಹೋರುವ
ಶಪಿತ ಪ್ರೇಮಲ, ವತ್ಸಲ,
ತಾಯಿಯಾಗಬೇಕು’
ಬೋರ ನಕ್ಕ
ನಾನು ಬೈದಾಗ ಅವನೂ ನಕ್ಕನೇನೋ?
*****
ಮೂಲ: ಕೇಶವ ಮೆಶ್ರಾಮ
(ಮರಾಠಿ)

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...