Home / ಕವನ / ಅನುವಾದ / ದೇವರಿಗೆ ಬೈದೆ

ದೇವರಿಗೆ ಬೈದೆ

ಒಂದು ದಿನ
ಸಿಟ್ಟಿನ ಭರದಲ್ಲಿ
ಪರಮೇಶ್ವರನಿಗೆ ನಾನು
ತಾಯಿ ಮೇಲೆ ಬೈದೆ
ಅವನುಲೋಕಾಭಿರಾಮವಾಗಿ
ಚಕ್ಕನೆ ನಕ್ಕ
ಪಕ್ಕದ ಮನೆಯ ಬೋರ
ಮುಖವನು ಬರಿದೆ ಕುಗ್ಗಿಸಿ
ಅಂಟು ಮೋರೆಯ ಗಂಟು ಹಾಕಿ
ಸವಾಲು ಮಾಡಿದ
‘ಯಾಕಯ್ಯ ನೀನು’ ಹೀಗೆ
ಆ ನಿರ್ಗುಣ, ನಿರಾಕಾರ
ಅನಾಥ ಜಗನ್ನಾಥನಿಗೆ
ಏನಾದರೂ ಅನ್ನುತ್ತಿ
ಶಬ್ದ ಜಾಲದಲಿ ಅವನ
‘ಧರ್ಮಫಣಿಯನ್ನು ಹಿಡಿಯುತ್ತಿ’
ಇನ್ನೊಮ್ಮೆ ಬೈದೆ ಬಿಗಿಯಾಗಿ
ವಿದ್ಯಾಪೀಠದ ಗೋಡೆ ಬಿರಿಯಿತು
ಮನುಷ್ಯ ಏಕೆ ಸಿಟ್ಟಾಗುತ್ತಾನೆ?
ಈ ವಿಷಯದ ಕುರಿತು ಅಲ್ಲಿ
ಶೋಧ ನಡೆದಿದೆ.
ಹೊಗೆಬತ್ತಿಯ ಧೂಮ ತುಂಬಿದ
ಹೊಟ್ಟೆಯಲ್ಲಿ
ಭಾವವಿಹ್ವಲ ಚರ್ಚೆ ನಡೆದಿದೆ
ನನ್ನ ಹುಟ್ಟು ದಿನದಂದು
ದೇವನಿಗೆ ಇನ್ನೊಮ್ಮೆ ಬೈದೆ
ಚಾಬೂಕಿನೇಟಿನಂತೆ
ಶಬ್ದದೇಟುಗಳ ಒಂದೇ ಸವನೆ
ಬಿಗಿದು ಹೇಳಿದೆ
‘ಪಾಪಿ ಮಗನೆ’ ಮುರುಕು ಭಾಕರಿಗಾಗಿ
ಸರಕು ಕಟ್ಟಿಗೆಯ ಮುರಿಸುವೆ
ತಾಯಿ ಉಟ್ಟ ಚಿಂದಿ ಬಟ್ಟೆಯ ಚೂರಿನಿಂದ
ಬಡಕಲು ಮೈಯ ಒರಸುವೆ
ಗುಟುಕು ಸೆರೆಯ ತೃಷೆಗಾಗಿ
ಕುಂಟಣಿಯನಾಗಿಸುವೆ, ದೇವ
ಆಗದಿದು ಬಾಳಲು ನಿನಗೆ
ಅದಕಾಗಿ ಮಣ್ಣಿನಲಿ ಹೋರುವ
ಶಪಿತ ಪ್ರೇಮಲ, ವತ್ಸಲ,
ತಾಯಿಯಾಗಬೇಕು’
ಬೋರ ನಕ್ಕ
ನಾನು ಬೈದಾಗ ಅವನೂ ನಕ್ಕನೇನೋ?
*****
ಮೂಲ: ಕೇಶವ ಮೆಶ್ರಾಮ
(ಮರಾಠಿ)

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...