ದೇವರಿಗೆ ಬೈದೆ

ಒಂದು ದಿನ
ಸಿಟ್ಟಿನ ಭರದಲ್ಲಿ
ಪರಮೇಶ್ವರನಿಗೆ ನಾನು
ತಾಯಿ ಮೇಲೆ ಬೈದೆ
ಅವನುಲೋಕಾಭಿರಾಮವಾಗಿ
ಚಕ್ಕನೆ ನಕ್ಕ
ಪಕ್ಕದ ಮನೆಯ ಬೋರ
ಮುಖವನು ಬರಿದೆ ಕುಗ್ಗಿಸಿ
ಅಂಟು ಮೋರೆಯ ಗಂಟು ಹಾಕಿ
ಸವಾಲು ಮಾಡಿದ
‘ಯಾಕಯ್ಯ ನೀನು’ ಹೀಗೆ
ಆ ನಿರ್ಗುಣ, ನಿರಾಕಾರ
ಅನಾಥ ಜಗನ್ನಾಥನಿಗೆ
ಏನಾದರೂ ಅನ್ನುತ್ತಿ
ಶಬ್ದ ಜಾಲದಲಿ ಅವನ
‘ಧರ್ಮಫಣಿಯನ್ನು ಹಿಡಿಯುತ್ತಿ’
ಇನ್ನೊಮ್ಮೆ ಬೈದೆ ಬಿಗಿಯಾಗಿ
ವಿದ್ಯಾಪೀಠದ ಗೋಡೆ ಬಿರಿಯಿತು
ಮನುಷ್ಯ ಏಕೆ ಸಿಟ್ಟಾಗುತ್ತಾನೆ?
ಈ ವಿಷಯದ ಕುರಿತು ಅಲ್ಲಿ
ಶೋಧ ನಡೆದಿದೆ.
ಹೊಗೆಬತ್ತಿಯ ಧೂಮ ತುಂಬಿದ
ಹೊಟ್ಟೆಯಲ್ಲಿ
ಭಾವವಿಹ್ವಲ ಚರ್ಚೆ ನಡೆದಿದೆ
ನನ್ನ ಹುಟ್ಟು ದಿನದಂದು
ದೇವನಿಗೆ ಇನ್ನೊಮ್ಮೆ ಬೈದೆ
ಚಾಬೂಕಿನೇಟಿನಂತೆ
ಶಬ್ದದೇಟುಗಳ ಒಂದೇ ಸವನೆ
ಬಿಗಿದು ಹೇಳಿದೆ
‘ಪಾಪಿ ಮಗನೆ’ ಮುರುಕು ಭಾಕರಿಗಾಗಿ
ಸರಕು ಕಟ್ಟಿಗೆಯ ಮುರಿಸುವೆ
ತಾಯಿ ಉಟ್ಟ ಚಿಂದಿ ಬಟ್ಟೆಯ ಚೂರಿನಿಂದ
ಬಡಕಲು ಮೈಯ ಒರಸುವೆ
ಗುಟುಕು ಸೆರೆಯ ತೃಷೆಗಾಗಿ
ಕುಂಟಣಿಯನಾಗಿಸುವೆ, ದೇವ
ಆಗದಿದು ಬಾಳಲು ನಿನಗೆ
ಅದಕಾಗಿ ಮಣ್ಣಿನಲಿ ಹೋರುವ
ಶಪಿತ ಪ್ರೇಮಲ, ವತ್ಸಲ,
ತಾಯಿಯಾಗಬೇಕು’
ಬೋರ ನಕ್ಕ
ನಾನು ಬೈದಾಗ ಅವನೂ ನಕ್ಕನೇನೋ?
*****
ಮೂಲ: ಕೇಶವ ಮೆಶ್ರಾಮ
(ಮರಾಠಿ)

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎದ್ದೇಳು ಎದ್ದೇಳು ಕನ್ನಡಿಗ
Next post ಕೃಷಿಕನೊಳು ಹಸುವೋ? ಕೃಷಿಕನೇ ಹಸುವೋ?

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…