Home / ಕವನ / ಅನುವಾದ / ಹಿಮಗಾನ

ಹಿಮಗಾನ

ಸೀಮಾಂತ ಪ್ರದೇಶದಲಿ ಕರಗುವ
ಶಿಲ್ಪವ ಕಂಡೆ ನಾನು
ಸರ್ವದೂರದಲಿ ಹಿಮ ಪ್ರತಿಮೆ
ಯಾತನಾಮಯ ಹಿಮಗಂಧ ಸಂಗೀತ
ಅಗಾಧ ಹಿಮ
ಮಾಯಾ ಮಹಿಮೆ.
ಉದುರುವ ಕಲೆ ಶಿಲ್ಪಕೆ ಸಿದ್ಧಿಸಿತೆಂತು
ಶುಭ್ರವಿಭೋರ ಕಣ ಸ್ಪಂದನ
ರೆಪ್ಪೆ ತೆರವಾದಾಗ
ಹರಡಿದ ವಿಹಗಗಣ
ಇನ್ನೂ ನನಗೆ ಹೊಳೆಯದಿರೆ
ರೆಪ್ಪೆಯಿಲ್ಲದ ದೃಷ್ಟಿಯನೀಗ
ಈ ಹಿಮದಲ್ಲಿ ತುಂಬಿ ಬಿಡಲೆ.
ನೋಡುವವು ಬಹುಶ
ತಳಮಳಿಸುವ ಚಿಟ್ಟೆಯ ಮುಖ ಶೋಧಿಸಿ
ಸೀಸ ಹಣಗಳಲಿ ನೋವಿನ
ಹಿಮಪೂರ್ಣಾಲಯ ಮರೆಸಿ
ಸುರಕ್ಷಿತವಾಗಿ ಅಡಗಿಸಿ ಇನ್ನೂ
ನನ್ನ ಕಣ್ಣಗೊಂಬೆಯಲಿ ತೂಗುವುದು.
ಹಗುರಗಾಳಿಯ ಲಯಕ್ಕೆ
ನನ್ನ ಸಂದರ್ಭೋಚಿತ
ಅಸ್ತಿತ್ವದಿಂದ
ಹೇಗೆ ಕಳೆಯಿತು
ಗ್ರೇಸನ ಪ್ರಾರ್ಥನೆಯ ಚಂದ್ರಹಾಸ
ಸಾಯಂಕಾಲ ಚಂದ್ರೋತ್ಸವದಿಂದ
ನಿನಗೆ ಮೆಚ್ಚಿದ ಒಂದು
ಅಪಾರ ಭಾವ ಸತ್ಯ
ಬಹುಶ…..
ಬಹುಶ ಇನ್ನೂ ಕರಗುವ ಹಿಮಕಣ
ಕಣ್ಣಗೊಂಬೆಯಲ್ಲಿ
ಸರ್ವತ್ರ ಉದುರುವ
ಈ ಹಿಮದಾತಂಕಗಾನ
ದೂರದ ಶಾಪದ ನೋವಿನ ಗೀತ
ನನಗಿದು ಶಾಪ ವ್ಯಾಕುಲ ವರದಾನ
ನಿನ್ನ ಮನದಂತಹ
ನನಗೆಂದೂ ಹೊಂದಿಕೆಯಾಗದ ಕವನ.
*****
ಮೂಲ: ನೀಲಿಮಾ ಮೋಡಕ್
(ಮರಾಠಿ)

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...