ಮೌನ

ಮೌನ ಉದ್ದಕ್ಕೆ ಬೆಳೆದಾಗ
ಭೂತ ಬೆಳೆದಂತೆ ಭಯವಾಗುತ್ತದೆ
ಮೌನ ಮನಸ್ಸಿನಲ್ಲಿ ಬೆಳೆದು ಕುಳಿತಾಗ
ತನ್ನವರು ಅನ್ಯರಾದಾಗ
ಜೊತೆಯವರು ಪರರಾಗಿ
ಏಕಾಂತವನ್ನು ಭೋಗಿಸ ಬೇಕಾಗಿ ಬಂದಾಗ
ಮೌನ ಭೀತವಾಗಿರದೆ
ಎಲೆಗಳಿಂದ ಹೊರಟ
ಹವೆಯೂ ರುಂಯೆಂದು
ಶಾಪವಾಗುತ್ತದೆ!
ಮೌನದಿಂದ ದೂರ ಓಡುವವರೆಲ್ಲ
ಚಾದಂಗಡಿಯಲ್ಲಿ
ಶರಾಬುಖಾನೆಯ ಮೇಜಿನಲ್ಲಿ
ಜೊತೆಗೊಬ್ಬರನ್ನು ಹುಡುಕ ತೊಡಗುತ್ತಾರೆ.
ಬೋರು ಹೊಡೆಯುವ ಯಾರದೋ
ಹಾಂಕ್ಕೆ ಹೂಂ ಸೇರಿಸಿ
ಕೇಳಿಸಿ ಕೊಂಡ ಸೋಗು ಹಾಕುತ್ತಾರೆ.
ಕೈಗೆಸಿಕ್ಕ ಒಣ ಕಾದಂಬರಿಯಲ್ಲಿ
ತೊಂಭತ್ತು ಮಿನಿಟುಗಳ ಹಿಂದಿ ಸಿನೇಮಾದಲ್ಲಿ
ಬೀದಿ ಬೀದಿಯ ನುಸುಳಿ
ವಿಂಡೋ ಶೋಪಿಂಗ್ ಮಾಡುತ್ತಾರೆ
ಕವಿಯ ಮನೆಯನ್ನು ಹೊಕ್ಕು
ಬೋರು ಕಾವ್ಯವ ಕೇಳಿ
ಕೇಳದೆಯೆ ವಾಹ! ಎಂದು ಮೆಚ್ಚುತ್ತಾರೆ
ಬಸ್‌ಸ್ಟಾಪಿನಲ್ಲಿ ವ್ಯರ್ಥವೆ ಬಸ್‌ ಬಿಡುತ್ತ
ಮನಸ್ಸು ಚಿಂತೆಯಲ್ಲದ್ದುವ ಮೊದಲೆ
ಸೆರೆಯ ಶರಣು ಹೊಡೆಯುತ್ತಾರೆ
ಯಾವ ಜತನವೂ ನಡೆಯದಿರೆ
ಮನೆಗೆ ಮರಳಿ
ಸತಿ ಸುತರಲ್ಲಿ ಹಿಂದೆ
ಆಡಿದ್ದನ್ನೆ ಆಡಿ
ಕೇಳದ-ಹೇಳದ ಫಾರ್ಮುಲವನ್ನೆ
ಮರುಕಳಿಸಿದಂತಾಗುವುದು
ನಂತರ ಮನೆಯಲ್ಲಿ
ಮನೆಯ ಮುಂದಿರುವ
ಸ್ಮಶಾನದಂತಹ,
ಒಂದು ದೀರ್ಘ ಮೌನ ಹರಡುವುದು
ಈ ಮೌನವನ್ನು ಬಿಗಿದಪ್ಪಿ
ಎಲ್ಲರು ಮಲಗುವರು
ನಿದ್ದೆಯಲ್ಲಿ ಬಡ ಬಡಿಸುವರು
ನನ್ನ ತೆರೆದಿದ್ದ ಕಣ್ಣಿಗೆ
ಬಾಲ್ಕನಿಯಲ್ಲಿ ತೂಗುವ
ಒಣವಸ್ತ್ರ ಕಾಣುವುದು
ನಮ್ಮ ಅಗಸ ಬರಲಿಲ್ಲ?
ನನ್ನ ಲುಂಗಿ ನೀನೆ ಒಗೆದದ್ದು ಲೇಸಾಯಿತು
ರಾತ್ರಿಯಲ್ಲಿ ಅದು….
ನಾನು ನನ್ನಷಕ್ಕೆಂಬಂತೆ
ಅವಳಿಗೆ ಹೇಳುತ್ತೇನೆ
ಕೋಮಿಕ್ಸ್ ಓದುತ್ತಿದ್ದ
ನನ್ನ ಮಗಳ ಮುಖ ಅರಳುತ್ತದೆ
ಅಪ್ಪ, ಮಾತು ಲುಂಗಿಯದಾದರೂ
ನಿನ್ನ ಮೌನ ಮುರಿಯಿತಲ್ಲ!
ಎಂದು ನಗೆ ಕಿಸಕ್ಕೆಂದು ಹೊರಡುತ್ತದೆ.
*****
ಮೂಲ: ಪ್ರೀತಮ್ ಬೇಲಿ
(ಹಿಂದಿ)

Tagged:

Leave a Reply

Your email address will not be published. Required fields are marked *

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...