ಮೌನ

ಮೌನ ಉದ್ದಕ್ಕೆ ಬೆಳೆದಾಗ
ಭೂತ ಬೆಳೆದಂತೆ ಭಯವಾಗುತ್ತದೆ
ಮೌನ ಮನಸ್ಸಿನಲ್ಲಿ ಬೆಳೆದು ಕುಳಿತಾಗ
ತನ್ನವರು ಅನ್ಯರಾದಾಗ
ಜೊತೆಯವರು ಪರರಾಗಿ
ಏಕಾಂತವನ್ನು ಭೋಗಿಸ ಬೇಕಾಗಿ ಬಂದಾಗ
ಮೌನ ಭೀತವಾಗಿರದೆ
ಎಲೆಗಳಿಂದ ಹೊರಟ
ಹವೆಯೂ ರುಂಯೆಂದು
ಶಾಪವಾಗುತ್ತದೆ!
ಮೌನದಿಂದ ದೂರ ಓಡುವವರೆಲ್ಲ
ಚಾದಂಗಡಿಯಲ್ಲಿ
ಶರಾಬುಖಾನೆಯ ಮೇಜಿನಲ್ಲಿ
ಜೊತೆಗೊಬ್ಬರನ್ನು ಹುಡುಕ ತೊಡಗುತ್ತಾರೆ.
ಬೋರು ಹೊಡೆಯುವ ಯಾರದೋ
ಹಾಂಕ್ಕೆ ಹೂಂ ಸೇರಿಸಿ
ಕೇಳಿಸಿ ಕೊಂಡ ಸೋಗು ಹಾಕುತ್ತಾರೆ.
ಕೈಗೆಸಿಕ್ಕ ಒಣ ಕಾದಂಬರಿಯಲ್ಲಿ
ತೊಂಭತ್ತು ಮಿನಿಟುಗಳ ಹಿಂದಿ ಸಿನೇಮಾದಲ್ಲಿ
ಬೀದಿ ಬೀದಿಯ ನುಸುಳಿ
ವಿಂಡೋ ಶೋಪಿಂಗ್ ಮಾಡುತ್ತಾರೆ
ಕವಿಯ ಮನೆಯನ್ನು ಹೊಕ್ಕು
ಬೋರು ಕಾವ್ಯವ ಕೇಳಿ
ಕೇಳದೆಯೆ ವಾಹ! ಎಂದು ಮೆಚ್ಚುತ್ತಾರೆ
ಬಸ್‌ಸ್ಟಾಪಿನಲ್ಲಿ ವ್ಯರ್ಥವೆ ಬಸ್‌ ಬಿಡುತ್ತ
ಮನಸ್ಸು ಚಿಂತೆಯಲ್ಲದ್ದುವ ಮೊದಲೆ
ಸೆರೆಯ ಶರಣು ಹೊಡೆಯುತ್ತಾರೆ
ಯಾವ ಜತನವೂ ನಡೆಯದಿರೆ
ಮನೆಗೆ ಮರಳಿ
ಸತಿ ಸುತರಲ್ಲಿ ಹಿಂದೆ
ಆಡಿದ್ದನ್ನೆ ಆಡಿ
ಕೇಳದ-ಹೇಳದ ಫಾರ್ಮುಲವನ್ನೆ
ಮರುಕಳಿಸಿದಂತಾಗುವುದು
ನಂತರ ಮನೆಯಲ್ಲಿ
ಮನೆಯ ಮುಂದಿರುವ
ಸ್ಮಶಾನದಂತಹ,
ಒಂದು ದೀರ್ಘ ಮೌನ ಹರಡುವುದು
ಈ ಮೌನವನ್ನು ಬಿಗಿದಪ್ಪಿ
ಎಲ್ಲರು ಮಲಗುವರು
ನಿದ್ದೆಯಲ್ಲಿ ಬಡ ಬಡಿಸುವರು
ನನ್ನ ತೆರೆದಿದ್ದ ಕಣ್ಣಿಗೆ
ಬಾಲ್ಕನಿಯಲ್ಲಿ ತೂಗುವ
ಒಣವಸ್ತ್ರ ಕಾಣುವುದು
ನಮ್ಮ ಅಗಸ ಬರಲಿಲ್ಲ?
ನನ್ನ ಲುಂಗಿ ನೀನೆ ಒಗೆದದ್ದು ಲೇಸಾಯಿತು
ರಾತ್ರಿಯಲ್ಲಿ ಅದು….
ನಾನು ನನ್ನಷಕ್ಕೆಂಬಂತೆ
ಅವಳಿಗೆ ಹೇಳುತ್ತೇನೆ
ಕೋಮಿಕ್ಸ್ ಓದುತ್ತಿದ್ದ
ನನ್ನ ಮಗಳ ಮುಖ ಅರಳುತ್ತದೆ
ಅಪ್ಪ, ಮಾತು ಲುಂಗಿಯದಾದರೂ
ನಿನ್ನ ಮೌನ ಮುರಿಯಿತಲ್ಲ!
ಎಂದು ನಗೆ ಕಿಸಕ್ಕೆಂದು ಹೊರಡುತ್ತದೆ.
*****
ಮೂಲ: ಪ್ರೀತಮ್ ಬೇಲಿ
(ಹಿಂದಿ)

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...