ಸಾವಿಗೆ ಒಡೆತನವಿಲ್ಲ

ಸಾವಿಗೆ ಸ್ವಾಮಿತ್ವವಿಲ್ಲ
ಸತ್ತವರು ನಗ್ನರಾಗುವರು
ಗಾಳಿಯಲೆಯಲಿ ಸುಳಿವ
ಮನುಷ್ಯನಲಿ ಮತ್ತು ಪಶ್ಚಿಮ ಚಂದ್ರನಲಿ
ಬೆರೆತು ಹೋಗುವರು.
ಅವರ ಎಲುವನ್ನು ಸರಿಯಾಗಿ ಹೆಕ್ಕುವಾಗ
ಶುದ್ಧ ಎಲುಬು ಮಾಯಾವಾಗುವುದು,
ಅವರ ಮೊಣಕ್ಕೆ ಪಾದಗಳಲಿ
ನಕ್ಷತ್ರ ಕಾಣುವುದು;
ಹುಚ್ಚರಾಗಿಯು ಅವರು ಮತಿವಂತರು,
ಸಮುದ್ರದಾಳದಲಿ ಮುಳುಗಿಯು
ಮತ್ತೆ ಏಳುವರು;
ಪ್ರೇಮಿಗಳು ಸಾಯುವರು
ಪ್ರೇಮ ಸಾಯದು
ಮತ್ತು ಸಾವಿಗೆ ಒಡೆತನವಿಲ್ಲ.
ಸಾಗರದಲೆಗಳ ಸುಳಿಯೊಳಗೆ
ಬಹುಕಾಲ ಸೇರಿಕೊಂಡರವರು
ಉದ್ದಕೆ ಒರಗಿ ಸಾಯಲಾರರು ಗಾಳಿಯಿಂದ.
ಚುಚ್ಚುವ ಮೊನಚು ಸರಲಿಗೆ
ಎದೆ ಕೊರೆಯುವಾಗಲು
ಗಾಲಿಗೆ ಬಿಗಿಯುವಾಗಲು
ಅವರು ಮುರಿಯರು ಬೇನೆಯಿಂದ.
ವಿಶ್ವಾಸ ಅವರ ಕೈಯಲಿ
ಎರಡು ತುಂಡಾಗುವುದು ಮತ್ತು
ಒಂದು ಕೋಡಿನ ದುಷ್ಟ ಮೃಗ
ಅವರನ್ನು ತೊಂದರೆಗೆ ಒಳಪಡಿಸುವುದು,
ಹೋಳಾಗಿ ಮುಗಿದರು ಅವರು ಒಡೆಯುವುದಿಲ್ಲ
ಸಾವಿಗೆಂದೂ ಸ್ವಾಮಿತ್ವವಿಲ್ಲ.
ಅವರ ಕಿವಿಯಲ್ಲಿ ಇನ್ನು ನೀರ್‌ಹಕ್ಕಿ
ಕೂಗಲಾರದು
ತೆರೆಗಳು ದಂಡೆಗೆ ಬಡಿದು
ಸದ್ದು ಮಾಡಲಾರವು
ಹೂವರಳುವಲ್ಲಿ ಇನ್ನು ಹೂವರಳದು
ಮಳೆಯ ಹೊಡೆತಕೆ ತಲೆ ಎತ್ತದು
ಸತ್ತ ಹುಚ್ಚು ಉಗುರಿನಂತಾದರು
ಮಲ್ಲಿಗೆಯ ಸುತ್ತಿಗೆಯಿಂದ
ಪಾತ್ರಗಳ ತಲೆಗೆ ಹೊಡೆದರು
ಬಿಸಿಲು ಬೀಳುವ ತನಕ ತಡೆದರು
ಬಿಸಿಲಿನಲ್ಲಿ.
ಸಾವಿಗೆ ಸ್ವಾಮಿತ್ವವೆಲ್ಲಿ.
*****
ಮೂಲ: ಸೈಲನ್ ಥೋಮಸ್
(And Death Shall Have No Dominion)

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಲ್ಲರ ಗಮನಕ್ಕೆ!!
Next post ಕೃಷಿ ಕಷ್ಟವೆನಲೆಷ್ಟು ನಷ್ಟವೋ ಮನುಜರಿಗೆ?

ಸಣ್ಣ ಕತೆ

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

cheap jordans|wholesale air max|wholesale jordans|wholesale jewelry|wholesale jerseys