Home / ಕವನ / ಅನುವಾದ / ಸಾವಿಗೆ ಒಡೆತನವಿಲ್ಲ

ಸಾವಿಗೆ ಒಡೆತನವಿಲ್ಲ

ಸಾವಿಗೆ ಸ್ವಾಮಿತ್ವವಿಲ್ಲ
ಸತ್ತವರು ನಗ್ನರಾಗುವರು
ಗಾಳಿಯಲೆಯಲಿ ಸುಳಿವ
ಮನುಷ್ಯನಲಿ ಮತ್ತು ಪಶ್ಚಿಮ ಚಂದ್ರನಲಿ
ಬೆರೆತು ಹೋಗುವರು.
ಅವರ ಎಲುವನ್ನು ಸರಿಯಾಗಿ ಹೆಕ್ಕುವಾಗ
ಶುದ್ಧ ಎಲುಬು ಮಾಯಾವಾಗುವುದು,
ಅವರ ಮೊಣಕ್ಕೆ ಪಾದಗಳಲಿ
ನಕ್ಷತ್ರ ಕಾಣುವುದು;
ಹುಚ್ಚರಾಗಿಯು ಅವರು ಮತಿವಂತರು,
ಸಮುದ್ರದಾಳದಲಿ ಮುಳುಗಿಯು
ಮತ್ತೆ ಏಳುವರು;
ಪ್ರೇಮಿಗಳು ಸಾಯುವರು
ಪ್ರೇಮ ಸಾಯದು
ಮತ್ತು ಸಾವಿಗೆ ಒಡೆತನವಿಲ್ಲ.
ಸಾಗರದಲೆಗಳ ಸುಳಿಯೊಳಗೆ
ಬಹುಕಾಲ ಸೇರಿಕೊಂಡರವರು
ಉದ್ದಕೆ ಒರಗಿ ಸಾಯಲಾರರು ಗಾಳಿಯಿಂದ.
ಚುಚ್ಚುವ ಮೊನಚು ಸರಲಿಗೆ
ಎದೆ ಕೊರೆಯುವಾಗಲು
ಗಾಲಿಗೆ ಬಿಗಿಯುವಾಗಲು
ಅವರು ಮುರಿಯರು ಬೇನೆಯಿಂದ.
ವಿಶ್ವಾಸ ಅವರ ಕೈಯಲಿ
ಎರಡು ತುಂಡಾಗುವುದು ಮತ್ತು
ಒಂದು ಕೋಡಿನ ದುಷ್ಟ ಮೃಗ
ಅವರನ್ನು ತೊಂದರೆಗೆ ಒಳಪಡಿಸುವುದು,
ಹೋಳಾಗಿ ಮುಗಿದರು ಅವರು ಒಡೆಯುವುದಿಲ್ಲ
ಸಾವಿಗೆಂದೂ ಸ್ವಾಮಿತ್ವವಿಲ್ಲ.
ಅವರ ಕಿವಿಯಲ್ಲಿ ಇನ್ನು ನೀರ್‌ಹಕ್ಕಿ
ಕೂಗಲಾರದು
ತೆರೆಗಳು ದಂಡೆಗೆ ಬಡಿದು
ಸದ್ದು ಮಾಡಲಾರವು
ಹೂವರಳುವಲ್ಲಿ ಇನ್ನು ಹೂವರಳದು
ಮಳೆಯ ಹೊಡೆತಕೆ ತಲೆ ಎತ್ತದು
ಸತ್ತ ಹುಚ್ಚು ಉಗುರಿನಂತಾದರು
ಮಲ್ಲಿಗೆಯ ಸುತ್ತಿಗೆಯಿಂದ
ಪಾತ್ರಗಳ ತಲೆಗೆ ಹೊಡೆದರು
ಬಿಸಿಲು ಬೀಳುವ ತನಕ ತಡೆದರು
ಬಿಸಿಲಿನಲ್ಲಿ.
ಸಾವಿಗೆ ಸ್ವಾಮಿತ್ವವೆಲ್ಲಿ.
*****
ಮೂಲ: ಸೈಲನ್ ಥೋಮಸ್
(And Death Shall Have No Dominion)

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...