Home / ಕವನ / ಅನುವಾದ / ಸಾವಿಗೆ ಒಡೆತನವಿಲ್ಲ

ಸಾವಿಗೆ ಒಡೆತನವಿಲ್ಲ

ಸಾವಿಗೆ ಸ್ವಾಮಿತ್ವವಿಲ್ಲ
ಸತ್ತವರು ನಗ್ನರಾಗುವರು
ಗಾಳಿಯಲೆಯಲಿ ಸುಳಿವ
ಮನುಷ್ಯನಲಿ ಮತ್ತು ಪಶ್ಚಿಮ ಚಂದ್ರನಲಿ
ಬೆರೆತು ಹೋಗುವರು.
ಅವರ ಎಲುವನ್ನು ಸರಿಯಾಗಿ ಹೆಕ್ಕುವಾಗ
ಶುದ್ಧ ಎಲುಬು ಮಾಯಾವಾಗುವುದು,
ಅವರ ಮೊಣಕ್ಕೆ ಪಾದಗಳಲಿ
ನಕ್ಷತ್ರ ಕಾಣುವುದು;
ಹುಚ್ಚರಾಗಿಯು ಅವರು ಮತಿವಂತರು,
ಸಮುದ್ರದಾಳದಲಿ ಮುಳುಗಿಯು
ಮತ್ತೆ ಏಳುವರು;
ಪ್ರೇಮಿಗಳು ಸಾಯುವರು
ಪ್ರೇಮ ಸಾಯದು
ಮತ್ತು ಸಾವಿಗೆ ಒಡೆತನವಿಲ್ಲ.
ಸಾಗರದಲೆಗಳ ಸುಳಿಯೊಳಗೆ
ಬಹುಕಾಲ ಸೇರಿಕೊಂಡರವರು
ಉದ್ದಕೆ ಒರಗಿ ಸಾಯಲಾರರು ಗಾಳಿಯಿಂದ.
ಚುಚ್ಚುವ ಮೊನಚು ಸರಲಿಗೆ
ಎದೆ ಕೊರೆಯುವಾಗಲು
ಗಾಲಿಗೆ ಬಿಗಿಯುವಾಗಲು
ಅವರು ಮುರಿಯರು ಬೇನೆಯಿಂದ.
ವಿಶ್ವಾಸ ಅವರ ಕೈಯಲಿ
ಎರಡು ತುಂಡಾಗುವುದು ಮತ್ತು
ಒಂದು ಕೋಡಿನ ದುಷ್ಟ ಮೃಗ
ಅವರನ್ನು ತೊಂದರೆಗೆ ಒಳಪಡಿಸುವುದು,
ಹೋಳಾಗಿ ಮುಗಿದರು ಅವರು ಒಡೆಯುವುದಿಲ್ಲ
ಸಾವಿಗೆಂದೂ ಸ್ವಾಮಿತ್ವವಿಲ್ಲ.
ಅವರ ಕಿವಿಯಲ್ಲಿ ಇನ್ನು ನೀರ್‌ಹಕ್ಕಿ
ಕೂಗಲಾರದು
ತೆರೆಗಳು ದಂಡೆಗೆ ಬಡಿದು
ಸದ್ದು ಮಾಡಲಾರವು
ಹೂವರಳುವಲ್ಲಿ ಇನ್ನು ಹೂವರಳದು
ಮಳೆಯ ಹೊಡೆತಕೆ ತಲೆ ಎತ್ತದು
ಸತ್ತ ಹುಚ್ಚು ಉಗುರಿನಂತಾದರು
ಮಲ್ಲಿಗೆಯ ಸುತ್ತಿಗೆಯಿಂದ
ಪಾತ್ರಗಳ ತಲೆಗೆ ಹೊಡೆದರು
ಬಿಸಿಲು ಬೀಳುವ ತನಕ ತಡೆದರು
ಬಿಸಿಲಿನಲ್ಲಿ.
ಸಾವಿಗೆ ಸ್ವಾಮಿತ್ವವೆಲ್ಲಿ.
*****
ಮೂಲ: ಸೈಲನ್ ಥೋಮಸ್
(And Death Shall Have No Dominion)

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...