ಸಾವಿಗೆ ಒಡೆತನವಿಲ್ಲ

ಸಾವಿಗೆ ಸ್ವಾಮಿತ್ವವಿಲ್ಲ
ಸತ್ತವರು ನಗ್ನರಾಗುವರು
ಗಾಳಿಯಲೆಯಲಿ ಸುಳಿವ
ಮನುಷ್ಯನಲಿ ಮತ್ತು ಪಶ್ಚಿಮ ಚಂದ್ರನಲಿ
ಬೆರೆತು ಹೋಗುವರು.
ಅವರ ಎಲುವನ್ನು ಸರಿಯಾಗಿ ಹೆಕ್ಕುವಾಗ
ಶುದ್ಧ ಎಲುಬು ಮಾಯಾವಾಗುವುದು,
ಅವರ ಮೊಣಕ್ಕೆ ಪಾದಗಳಲಿ
ನಕ್ಷತ್ರ ಕಾಣುವುದು;
ಹುಚ್ಚರಾಗಿಯು ಅವರು ಮತಿವಂತರು,
ಸಮುದ್ರದಾಳದಲಿ ಮುಳುಗಿಯು
ಮತ್ತೆ ಏಳುವರು;
ಪ್ರೇಮಿಗಳು ಸಾಯುವರು
ಪ್ರೇಮ ಸಾಯದು
ಮತ್ತು ಸಾವಿಗೆ ಒಡೆತನವಿಲ್ಲ.
ಸಾಗರದಲೆಗಳ ಸುಳಿಯೊಳಗೆ
ಬಹುಕಾಲ ಸೇರಿಕೊಂಡರವರು
ಉದ್ದಕೆ ಒರಗಿ ಸಾಯಲಾರರು ಗಾಳಿಯಿಂದ.
ಚುಚ್ಚುವ ಮೊನಚು ಸರಲಿಗೆ
ಎದೆ ಕೊರೆಯುವಾಗಲು
ಗಾಲಿಗೆ ಬಿಗಿಯುವಾಗಲು
ಅವರು ಮುರಿಯರು ಬೇನೆಯಿಂದ.
ವಿಶ್ವಾಸ ಅವರ ಕೈಯಲಿ
ಎರಡು ತುಂಡಾಗುವುದು ಮತ್ತು
ಒಂದು ಕೋಡಿನ ದುಷ್ಟ ಮೃಗ
ಅವರನ್ನು ತೊಂದರೆಗೆ ಒಳಪಡಿಸುವುದು,
ಹೋಳಾಗಿ ಮುಗಿದರು ಅವರು ಒಡೆಯುವುದಿಲ್ಲ
ಸಾವಿಗೆಂದೂ ಸ್ವಾಮಿತ್ವವಿಲ್ಲ.
ಅವರ ಕಿವಿಯಲ್ಲಿ ಇನ್ನು ನೀರ್‌ಹಕ್ಕಿ
ಕೂಗಲಾರದು
ತೆರೆಗಳು ದಂಡೆಗೆ ಬಡಿದು
ಸದ್ದು ಮಾಡಲಾರವು
ಹೂವರಳುವಲ್ಲಿ ಇನ್ನು ಹೂವರಳದು
ಮಳೆಯ ಹೊಡೆತಕೆ ತಲೆ ಎತ್ತದು
ಸತ್ತ ಹುಚ್ಚು ಉಗುರಿನಂತಾದರು
ಮಲ್ಲಿಗೆಯ ಸುತ್ತಿಗೆಯಿಂದ
ಪಾತ್ರಗಳ ತಲೆಗೆ ಹೊಡೆದರು
ಬಿಸಿಲು ಬೀಳುವ ತನಕ ತಡೆದರು
ಬಿಸಿಲಿನಲ್ಲಿ.
ಸಾವಿಗೆ ಸ್ವಾಮಿತ್ವವೆಲ್ಲಿ.
*****
ಮೂಲ: ಸೈಲನ್ ಥೋಮಸ್
(And Death Shall Have No Dominion)

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಲ್ಲರ ಗಮನಕ್ಕೆ!!
Next post ಕೃಷಿ ಕಷ್ಟವೆನಲೆಷ್ಟು ನಷ್ಟವೋ ಮನುಜರಿಗೆ?

ಸಣ್ಣ ಕತೆ

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…