Home / ಕವನ / ಅನುವಾದ / ಸಾವಿಗೆ ಒಡೆತನವಿಲ್ಲ

ಸಾವಿಗೆ ಒಡೆತನವಿಲ್ಲ

ಸಾವಿಗೆ ಸ್ವಾಮಿತ್ವವಿಲ್ಲ
ಸತ್ತವರು ನಗ್ನರಾಗುವರು
ಗಾಳಿಯಲೆಯಲಿ ಸುಳಿವ
ಮನುಷ್ಯನಲಿ ಮತ್ತು ಪಶ್ಚಿಮ ಚಂದ್ರನಲಿ
ಬೆರೆತು ಹೋಗುವರು.
ಅವರ ಎಲುವನ್ನು ಸರಿಯಾಗಿ ಹೆಕ್ಕುವಾಗ
ಶುದ್ಧ ಎಲುಬು ಮಾಯಾವಾಗುವುದು,
ಅವರ ಮೊಣಕ್ಕೆ ಪಾದಗಳಲಿ
ನಕ್ಷತ್ರ ಕಾಣುವುದು;
ಹುಚ್ಚರಾಗಿಯು ಅವರು ಮತಿವಂತರು,
ಸಮುದ್ರದಾಳದಲಿ ಮುಳುಗಿಯು
ಮತ್ತೆ ಏಳುವರು;
ಪ್ರೇಮಿಗಳು ಸಾಯುವರು
ಪ್ರೇಮ ಸಾಯದು
ಮತ್ತು ಸಾವಿಗೆ ಒಡೆತನವಿಲ್ಲ.
ಸಾಗರದಲೆಗಳ ಸುಳಿಯೊಳಗೆ
ಬಹುಕಾಲ ಸೇರಿಕೊಂಡರವರು
ಉದ್ದಕೆ ಒರಗಿ ಸಾಯಲಾರರು ಗಾಳಿಯಿಂದ.
ಚುಚ್ಚುವ ಮೊನಚು ಸರಲಿಗೆ
ಎದೆ ಕೊರೆಯುವಾಗಲು
ಗಾಲಿಗೆ ಬಿಗಿಯುವಾಗಲು
ಅವರು ಮುರಿಯರು ಬೇನೆಯಿಂದ.
ವಿಶ್ವಾಸ ಅವರ ಕೈಯಲಿ
ಎರಡು ತುಂಡಾಗುವುದು ಮತ್ತು
ಒಂದು ಕೋಡಿನ ದುಷ್ಟ ಮೃಗ
ಅವರನ್ನು ತೊಂದರೆಗೆ ಒಳಪಡಿಸುವುದು,
ಹೋಳಾಗಿ ಮುಗಿದರು ಅವರು ಒಡೆಯುವುದಿಲ್ಲ
ಸಾವಿಗೆಂದೂ ಸ್ವಾಮಿತ್ವವಿಲ್ಲ.
ಅವರ ಕಿವಿಯಲ್ಲಿ ಇನ್ನು ನೀರ್‌ಹಕ್ಕಿ
ಕೂಗಲಾರದು
ತೆರೆಗಳು ದಂಡೆಗೆ ಬಡಿದು
ಸದ್ದು ಮಾಡಲಾರವು
ಹೂವರಳುವಲ್ಲಿ ಇನ್ನು ಹೂವರಳದು
ಮಳೆಯ ಹೊಡೆತಕೆ ತಲೆ ಎತ್ತದು
ಸತ್ತ ಹುಚ್ಚು ಉಗುರಿನಂತಾದರು
ಮಲ್ಲಿಗೆಯ ಸುತ್ತಿಗೆಯಿಂದ
ಪಾತ್ರಗಳ ತಲೆಗೆ ಹೊಡೆದರು
ಬಿಸಿಲು ಬೀಳುವ ತನಕ ತಡೆದರು
ಬಿಸಿಲಿನಲ್ಲಿ.
ಸಾವಿಗೆ ಸ್ವಾಮಿತ್ವವೆಲ್ಲಿ.
*****
ಮೂಲ: ಸೈಲನ್ ಥೋಮಸ್
(And Death Shall Have No Dominion)

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್