Home / ಕವನ / ಅನುವಾದ / ಸಾವಿಗೆ ಒಡೆತನವಿಲ್ಲ

ಸಾವಿಗೆ ಒಡೆತನವಿಲ್ಲ

ಸಾವಿಗೆ ಸ್ವಾಮಿತ್ವವಿಲ್ಲ
ಸತ್ತವರು ನಗ್ನರಾಗುವರು
ಗಾಳಿಯಲೆಯಲಿ ಸುಳಿವ
ಮನುಷ್ಯನಲಿ ಮತ್ತು ಪಶ್ಚಿಮ ಚಂದ್ರನಲಿ
ಬೆರೆತು ಹೋಗುವರು.
ಅವರ ಎಲುವನ್ನು ಸರಿಯಾಗಿ ಹೆಕ್ಕುವಾಗ
ಶುದ್ಧ ಎಲುಬು ಮಾಯಾವಾಗುವುದು,
ಅವರ ಮೊಣಕ್ಕೆ ಪಾದಗಳಲಿ
ನಕ್ಷತ್ರ ಕಾಣುವುದು;
ಹುಚ್ಚರಾಗಿಯು ಅವರು ಮತಿವಂತರು,
ಸಮುದ್ರದಾಳದಲಿ ಮುಳುಗಿಯು
ಮತ್ತೆ ಏಳುವರು;
ಪ್ರೇಮಿಗಳು ಸಾಯುವರು
ಪ್ರೇಮ ಸಾಯದು
ಮತ್ತು ಸಾವಿಗೆ ಒಡೆತನವಿಲ್ಲ.
ಸಾಗರದಲೆಗಳ ಸುಳಿಯೊಳಗೆ
ಬಹುಕಾಲ ಸೇರಿಕೊಂಡರವರು
ಉದ್ದಕೆ ಒರಗಿ ಸಾಯಲಾರರು ಗಾಳಿಯಿಂದ.
ಚುಚ್ಚುವ ಮೊನಚು ಸರಲಿಗೆ
ಎದೆ ಕೊರೆಯುವಾಗಲು
ಗಾಲಿಗೆ ಬಿಗಿಯುವಾಗಲು
ಅವರು ಮುರಿಯರು ಬೇನೆಯಿಂದ.
ವಿಶ್ವಾಸ ಅವರ ಕೈಯಲಿ
ಎರಡು ತುಂಡಾಗುವುದು ಮತ್ತು
ಒಂದು ಕೋಡಿನ ದುಷ್ಟ ಮೃಗ
ಅವರನ್ನು ತೊಂದರೆಗೆ ಒಳಪಡಿಸುವುದು,
ಹೋಳಾಗಿ ಮುಗಿದರು ಅವರು ಒಡೆಯುವುದಿಲ್ಲ
ಸಾವಿಗೆಂದೂ ಸ್ವಾಮಿತ್ವವಿಲ್ಲ.
ಅವರ ಕಿವಿಯಲ್ಲಿ ಇನ್ನು ನೀರ್‌ಹಕ್ಕಿ
ಕೂಗಲಾರದು
ತೆರೆಗಳು ದಂಡೆಗೆ ಬಡಿದು
ಸದ್ದು ಮಾಡಲಾರವು
ಹೂವರಳುವಲ್ಲಿ ಇನ್ನು ಹೂವರಳದು
ಮಳೆಯ ಹೊಡೆತಕೆ ತಲೆ ಎತ್ತದು
ಸತ್ತ ಹುಚ್ಚು ಉಗುರಿನಂತಾದರು
ಮಲ್ಲಿಗೆಯ ಸುತ್ತಿಗೆಯಿಂದ
ಪಾತ್ರಗಳ ತಲೆಗೆ ಹೊಡೆದರು
ಬಿಸಿಲು ಬೀಳುವ ತನಕ ತಡೆದರು
ಬಿಸಿಲಿನಲ್ಲಿ.
ಸಾವಿಗೆ ಸ್ವಾಮಿತ್ವವೆಲ್ಲಿ.
*****
ಮೂಲ: ಸೈಲನ್ ಥೋಮಸ್
(And Death Shall Have No Dominion)

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...