Home / ಕವನ / ಅನುವಾದ / ಕುಬ್ಜರು

ಕುಬ್ಜರು

ನಾವೆಲ್ಲ ಕುಬ್ಜರು
ಮನಸ್ಸು, ಬುದ್ಧಿ, ಭಾವನೆಯಿಂದ
ಚೇತನ, ಚಿಂತನ, ವಿವೇಕದಿಂದ
ನಾವು ವಿಶಿಷ್ಟರಲ್ಲ
ಸಾಮಾನ್ಯರು, ಅದಕೆಂದೆ
ಎಲ್ಲ ಕಾಲದಲ್ಲಿಯು
ಕುಬ್ಜರಿರ ಬೇಕೆಂದೆ
ಲೋಕದ ಬಯಕೆ.
ವಕ್ತಾರರಿಗೆ ಶೋತೃಗಳಾಗಿ
ನೇತಾರರಿಗೆ ಹಿಂಬಾಲಕರಾಗಿ
ಭೋಧಕರಿಗೆ ಪಾಠಕರು
ಅಂದೋಲನಕೆ ಗುಂಪು
ಧರ್ಮಕ್ಕೆ ಭಕ್ತರಾಗಿ,
ಸಂಪ್ರದಾಯಗಳಿಗೆ ಮತಿಮಂದರಾಗಿ
ಆಡಳಿತೆಗೆ ಬಾಬುಗಳು
ಗಿರಣಿಗಳಿಗೆ ಕಾರ್ಮಿಕರಾಗಿ
ತೋಪುಗಳಿಗೆ ಕಾರ್ತೂಸ್
ಪಕ್ಷದೊಡೆಯರಿಗೆ ಯಸ್‌ಮೆನ್
ಆಳುವವರಿಗೆ ಗುಲಾಮರಾಗಿ
ವ್ಯವಸ್ಥೆಗೆ ಭ್ರಷ್ಟರು
ಡೆಮೊಕ್ರಸಿಗೆ ಮಿಡಿಯೊಕರು
ಮತವಾದಿಗಳಿಗೆ ಮೂರ್ಖರು
ಪಾರ್ಟಿಯ ಅಂಧ ಅನುಯಾಯಿಗಳಾಗಿ
ನಾವೆಲ್ಲ
ಯುಗ ಯುಗದಿಂದ
ಅವರಿಗಾಗಿಯೆ ಬದುಕಿ ಬಂದಿದ್ದೇವೆ
ಕ್ರೀತದಾಸರು ನಾವು
ಇತಿಹಾಸದ ಚಿಂದಿ ಹೊಲಿಯುತ್ತೇವೆ
ಇತಿಹಾಸ ಅವರದು
ನಾವು ಶಾಯಿ ಮಾತ್ರ
ವಿಜಯ ಅವರದು
ನಾವು ಗಾಯಾಳುಗಳು
ಎಂದೆಂದಿಗೂ
ಗಾಯಗೊಂಡ ಸಿಪಾಯಿಯಾಗಿ
ಆ ದೈತ್ಯರ ಸೇವೆಗೈಯುತ
ಬದುಕ ಬೇಕಾಗಿದೆ
ಕುಬ್ಜರಾಗಿ.
*****
ಮೂಲ: ಗಿರಿಜಾ ಕುಮಾರ ಮಾಥುರ್
(ಹಿಂದಿ)

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...