Home / ಕವನ / ಅನುವಾದ / ಸ್ನೇಹ-ಶಪಥ

ಸ್ನೇಹ-ಶಪಥ

ಮಿತ್ರನಾಗಲಿ ಶತ್ರುವಾಗಲಿ
ಗುರುತಿನವನಾಗಲಿ, ಗುರುತಿಲ್ಲದವನಾಗಲಿ
ದೊಡ್ಡವನೆಂದು ತಿಳಿದವನ
ಬಡವನೆಂದು ಒಪ್ಪಿದವನ
ಮೇಲೆ
ಯಾವದೇ ಕಾರಣದಿಂದ
ಅಪಯಶದ ಧೂಳು ಹಾರಿದರೆ
ನೀನು
ಕಟುವಚನದಿಂದ ಅವನನ್ನು
ದೂರುವ ತಪ್ಪು ಮಾಡದಿರು.
ಇವನು ಹಾಗೇ ಇದ್ದನೆಂದು
ನೂರಾರು ಪುರಾವೆಗಳ ಹಿಡಿದು
ಸಾಧಿಸದಿರು,
ಅವನು ನಿಜವಾಗಿಯೂ ಎಡವಿ
ತಪ್ಪುದಾರಿ ಹಿಡಿದರೆ
ಕಟು ಮಾತಿನಿಂದಲ್ಲ
ಸ್ನೇಹದಿಂದ ಮಾತಾಡಿ ನೋಡು.
ದೋಷ ಎಷ್ಟು ಆಳವಾದರು
ಸ್ನೇಹ ಅಲ್ಲಿ ಇಳಿಯುವುದು
ಲೋಕ ಎಷ್ಟು ಭ್ರಷ್ಟವಾದರು
ಸ್ನೇಹ ಎಲ್ಲರಿಗೆ ಹಿಡಿಸುವುದು
ಬಿದ್ದವರನ್ನು ಎಬ್ಬಿಸುವಷ್ಟು
ಪ್ರಿಯ ಕಾರ್ಯವಿಲ್ಲ
ಎತ್ತಿ ಸ್ನೇಹ ಹಂಚದ
ಕೀಳ್ತನದಷ್ಟು ಪತನ ಬೇರಿಲ್ಲ.
ಸ್ನೇಹಲ ದೃಷ್ಟಿಯಿಂದ
ನೋಡಿದರೆ, ಕಣ್ಣಿನ ದುಸ್ಸಾಹಸ
ಮರೆಯಾಗುವುದು
ಪ್ರತಿಯೊಂದು ದುಷ್ಟತನ
ಕಂಬನಿಯಾಗಿ
ಕಪೋಲದಿಂದ ಹರಿಯುವುದು.
ಆಣೆಯ ಮೇಲೆ ನಿನಗೆ
ಹೆಚ್ಚು ಮೋಹ
ಆಣೆ ಹಾಕುವ ಚಟ ಒಳಿತಲ್ಲ
ಶಪಥ ಜೊತೆಗೆ ತೊಂದರೆಯನ್ನು ತರುವುದು
ನಿನ್ನ ಮೇಲೆ ಹಾವಿಯಾಗುವುದು.
ಹೊರೆಸುವೆನು ಆಣೆ ನಿನ್ನ ಮೇಲೆ ನಾನು
ಇಳಿಸಿ ಹಾಡಿ ಹರಡು
ಸ್ನೇಹದಿ ನೀನು,
ಆಣೆ ನಿನಗೆ ಆ ಕರುಣಾಕರನ,
ಬೆತ್ತಲೆಯಾಗಿ ಸ್ನೇಹದ
ಭಿಕ್ಷೆ ಬೇಡುವ ಭಿಕ್ಷುಕನ
ಕಟುವಾಗಿ ಒರೆಯದೆ, ಹೊರಡು
ಅಂತರಮನದ ನೇಹದಿ ಹೇಳು
ಕೊನರುವುದು ಕೊರಡು.
*****
ಮೂಲ: ಭವಾನಿ ಪ್ರಸಾದ ಮಿಶ್ರ
(ಹಿಂದಿ)

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...