ಬಂತಾವ್ವಾ ಬಂತಾವ್ವಾ ಬಂತವ್ವಾ ಶ್ರಾವಣಾ

ಬಂತಾವ್ವಾ ಬಂತಾವ್ವಾ ಬಂತವ್ವಾ ಶ್ರಾವಣಾ
ಚಂದೇನ ಚಾರೇನ ಸಾಮೇರ ಚರಣಾ ||ಪಲ್ಲ||

ಮಠತುಂಬ ರಂಗೋಲಿ ಮುತೈದಿ ಬಾಲೇರು
ಪಡಿಹಿಗ್ಗು ಪಂಚಮಿ ಮಾಡ್ಯಾರೆ
ತೋರಮುತ್ತಿನ ಕಾಂತಿ ಮುತ್ತು ಮಾಣಿಕ ದಾಂತಿ
ಕಾಶೀಯ ಪೀತಾಂಬ್ರ ಉಟ್ಟಾರೆ ||೧||

ಪರಪಂಚ ಪಂಚೇತಿ ಫಜೀತಿ ಪುರಮಾಶಿ
ಕೀರ್ತನಾ ಕೇಳಾಗ ಹೋಗೇತೆ
ಉಟಸೀರಿ ಜಾರೇತೆ ಮುಡಿಸೆರಗು ಹಾರೇತೆ
ಗರತೇರ ಮಾನಾ ಮಾರೇತೆ ||೨||

ಸಾಮೇರ ಮಂಚಕ್ಕ ಪಂಚರಂಭೇರೇರಿ
ಹಣ್ಗಾಯಿ ನೀರ್‍ಗಾಯಿ ಆಗ್ಯಾರೆ
ಸಾಮೇರ ತೊಡಿಮ್ಯಾಗ ಆರೂರ ಹುಡಿಗೇರು
ಬಕಬಾರ್‍ಲೆ ಕಣ್ತಿರಿಗಿ ಬಿದ್ದಾರೆ ||೩||

ಗುರುಗೋಳು ಬಂದಾರೆ ಗುರುವಣ್ಣಿ ಕೂಡ್ಯಾರೆ
ಮಠದಾಗ ಹೆಂಡಿರ ಮಾಡ್ಯಾರೆ
ಹೋದೋರು ಆರ್‍ಮಂದಿ ಬಂದೋರು ಮೂರ್‍ಮಂದಿ
ಊರ್‍ಮಂದಿ ಹುಡಿಗೇರು ಬಸರಾಗೆ ||೪||

ಗೋಡಿ ಬುದಬುದು ಬಿದ್ದು ಪೀಠ ಫಡಫಡ ಎದ್ದು
ಸಾಮೇರು ಕಾಮೇರು ಆಗ್ಯಾರೆ
ನವಿಲೀನ ನಾರೇರ ಕದ್ದಾರೆ ಮೆದ್ದಾರೆ
ಮುಗಿಲೀನ ತೊಟ್ಟಿಲಾ ತೂಗ್ಯಾರೆ ||೫||
*****
ಶ್ರಾವಣ=ಆತ್ಮಿಕ ಶ್ರವಣಾ; ಸ್ವಾಮೇರು = ಭಗವಂತ; ಮಠ = ಬ್ರಹ್ಮ ತತ್ವ; ಬಾಲೇರು-ಹುಡಿಗೇರು-ಗರತೇರು-ಗುರುವಣ್ಣಿ-ಹೆಂಡಿರು = ಸರ್ವ ಆತ್ಮರು; ಪಂಚಮಿ=ಪಂಚೇಂದ್ರಿಯಗಳ ಕೂಟ; ಉಟಸೀರಿ= ದೇಹಾಭಿಮಾನ (Physical Consciousness); ಆರ್‍ಮಂದಿ = ಷಡ್ವೈರಿಗಳು; ಮೂರ್‍ಮಂದಿ=ಸತ್, ಚಿತ್, ಆನಂದ; ಬಸರಾಗು=ಆತ್ಮ ಜ್ಞಾನಿಯಾಗು; ಕಾಮೇರು = ಕಾರುಣ್ಯದ ಮೇರು; ಮುಗಿಲಿನ ತೊಟ್ಟಿಲು = ಅಶರೀರ ಸ್ಥಿತಿ (Supra-mental plane).

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಾಕೆ
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೬೧

ಸಣ್ಣ ಕತೆ

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…