Home / ಕವನ / ಕವಿತೆ / ಬಂತಾವ್ವಾ ಬಂತಾವ್ವಾ ಬಂತವ್ವಾ ಶ್ರಾವಣಾ

ಬಂತಾವ್ವಾ ಬಂತಾವ್ವಾ ಬಂತವ್ವಾ ಶ್ರಾವಣಾ

ಬಂತಾವ್ವಾ ಬಂತಾವ್ವಾ ಬಂತವ್ವಾ ಶ್ರಾವಣಾ
ಚಂದೇನ ಚಾರೇನ ಸಾಮೇರ ಚರಣಾ ||ಪಲ್ಲ||

ಮಠತುಂಬ ರಂಗೋಲಿ ಮುತೈದಿ ಬಾಲೇರು
ಪಡಿಹಿಗ್ಗು ಪಂಚಮಿ ಮಾಡ್ಯಾರೆ
ತೋರಮುತ್ತಿನ ಕಾಂತಿ ಮುತ್ತು ಮಾಣಿಕ ದಾಂತಿ
ಕಾಶೀಯ ಪೀತಾಂಬ್ರ ಉಟ್ಟಾರೆ ||೧||

ಪರಪಂಚ ಪಂಚೇತಿ ಫಜೀತಿ ಪುರಮಾಶಿ
ಕೀರ್ತನಾ ಕೇಳಾಗ ಹೋಗೇತೆ
ಉಟಸೀರಿ ಜಾರೇತೆ ಮುಡಿಸೆರಗು ಹಾರೇತೆ
ಗರತೇರ ಮಾನಾ ಮಾರೇತೆ ||೨||

ಸಾಮೇರ ಮಂಚಕ್ಕ ಪಂಚರಂಭೇರೇರಿ
ಹಣ್ಗಾಯಿ ನೀರ್‍ಗಾಯಿ ಆಗ್ಯಾರೆ
ಸಾಮೇರ ತೊಡಿಮ್ಯಾಗ ಆರೂರ ಹುಡಿಗೇರು
ಬಕಬಾರ್‍ಲೆ ಕಣ್ತಿರಿಗಿ ಬಿದ್ದಾರೆ ||೩||

ಗುರುಗೋಳು ಬಂದಾರೆ ಗುರುವಣ್ಣಿ ಕೂಡ್ಯಾರೆ
ಮಠದಾಗ ಹೆಂಡಿರ ಮಾಡ್ಯಾರೆ
ಹೋದೋರು ಆರ್‍ಮಂದಿ ಬಂದೋರು ಮೂರ್‍ಮಂದಿ
ಊರ್‍ಮಂದಿ ಹುಡಿಗೇರು ಬಸರಾಗೆ ||೪||

ಗೋಡಿ ಬುದಬುದು ಬಿದ್ದು ಪೀಠ ಫಡಫಡ ಎದ್ದು
ಸಾಮೇರು ಕಾಮೇರು ಆಗ್ಯಾರೆ
ನವಿಲೀನ ನಾರೇರ ಕದ್ದಾರೆ ಮೆದ್ದಾರೆ
ಮುಗಿಲೀನ ತೊಟ್ಟಿಲಾ ತೂಗ್ಯಾರೆ ||೫||
*****
ಶ್ರಾವಣ=ಆತ್ಮಿಕ ಶ್ರವಣಾ; ಸ್ವಾಮೇರು = ಭಗವಂತ; ಮಠ = ಬ್ರಹ್ಮ ತತ್ವ; ಬಾಲೇರು-ಹುಡಿಗೇರು-ಗರತೇರು-ಗುರುವಣ್ಣಿ-ಹೆಂಡಿರು = ಸರ್ವ ಆತ್ಮರು; ಪಂಚಮಿ=ಪಂಚೇಂದ್ರಿಯಗಳ ಕೂಟ; ಉಟಸೀರಿ= ದೇಹಾಭಿಮಾನ (Physical Consciousness); ಆರ್‍ಮಂದಿ = ಷಡ್ವೈರಿಗಳು; ಮೂರ್‍ಮಂದಿ=ಸತ್, ಚಿತ್, ಆನಂದ; ಬಸರಾಗು=ಆತ್ಮ ಜ್ಞಾನಿಯಾಗು; ಕಾಮೇರು = ಕಾರುಣ್ಯದ ಮೇರು; ಮುಗಿಲಿನ ತೊಟ್ಟಿಲು = ಅಶರೀರ ಸ್ಥಿತಿ (Supra-mental plane).

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...