Home / ಕವನ / ಕವಿತೆ / ಬಂತಾವ್ವಾ ಬಂತಾವ್ವಾ ಬಂತವ್ವಾ ಶ್ರಾವಣಾ

ಬಂತಾವ್ವಾ ಬಂತಾವ್ವಾ ಬಂತವ್ವಾ ಶ್ರಾವಣಾ

ಬಂತಾವ್ವಾ ಬಂತಾವ್ವಾ ಬಂತವ್ವಾ ಶ್ರಾವಣಾ
ಚಂದೇನ ಚಾರೇನ ಸಾಮೇರ ಚರಣಾ ||ಪಲ್ಲ||

ಮಠತುಂಬ ರಂಗೋಲಿ ಮುತೈದಿ ಬಾಲೇರು
ಪಡಿಹಿಗ್ಗು ಪಂಚಮಿ ಮಾಡ್ಯಾರೆ
ತೋರಮುತ್ತಿನ ಕಾಂತಿ ಮುತ್ತು ಮಾಣಿಕ ದಾಂತಿ
ಕಾಶೀಯ ಪೀತಾಂಬ್ರ ಉಟ್ಟಾರೆ ||೧||

ಪರಪಂಚ ಪಂಚೇತಿ ಫಜೀತಿ ಪುರಮಾಶಿ
ಕೀರ್ತನಾ ಕೇಳಾಗ ಹೋಗೇತೆ
ಉಟಸೀರಿ ಜಾರೇತೆ ಮುಡಿಸೆರಗು ಹಾರೇತೆ
ಗರತೇರ ಮಾನಾ ಮಾರೇತೆ ||೨||

ಸಾಮೇರ ಮಂಚಕ್ಕ ಪಂಚರಂಭೇರೇರಿ
ಹಣ್ಗಾಯಿ ನೀರ್‍ಗಾಯಿ ಆಗ್ಯಾರೆ
ಸಾಮೇರ ತೊಡಿಮ್ಯಾಗ ಆರೂರ ಹುಡಿಗೇರು
ಬಕಬಾರ್‍ಲೆ ಕಣ್ತಿರಿಗಿ ಬಿದ್ದಾರೆ ||೩||

ಗುರುಗೋಳು ಬಂದಾರೆ ಗುರುವಣ್ಣಿ ಕೂಡ್ಯಾರೆ
ಮಠದಾಗ ಹೆಂಡಿರ ಮಾಡ್ಯಾರೆ
ಹೋದೋರು ಆರ್‍ಮಂದಿ ಬಂದೋರು ಮೂರ್‍ಮಂದಿ
ಊರ್‍ಮಂದಿ ಹುಡಿಗೇರು ಬಸರಾಗೆ ||೪||

ಗೋಡಿ ಬುದಬುದು ಬಿದ್ದು ಪೀಠ ಫಡಫಡ ಎದ್ದು
ಸಾಮೇರು ಕಾಮೇರು ಆಗ್ಯಾರೆ
ನವಿಲೀನ ನಾರೇರ ಕದ್ದಾರೆ ಮೆದ್ದಾರೆ
ಮುಗಿಲೀನ ತೊಟ್ಟಿಲಾ ತೂಗ್ಯಾರೆ ||೫||
*****
ಶ್ರಾವಣ=ಆತ್ಮಿಕ ಶ್ರವಣಾ; ಸ್ವಾಮೇರು = ಭಗವಂತ; ಮಠ = ಬ್ರಹ್ಮ ತತ್ವ; ಬಾಲೇರು-ಹುಡಿಗೇರು-ಗರತೇರು-ಗುರುವಣ್ಣಿ-ಹೆಂಡಿರು = ಸರ್ವ ಆತ್ಮರು; ಪಂಚಮಿ=ಪಂಚೇಂದ್ರಿಯಗಳ ಕೂಟ; ಉಟಸೀರಿ= ದೇಹಾಭಿಮಾನ (Physical Consciousness); ಆರ್‍ಮಂದಿ = ಷಡ್ವೈರಿಗಳು; ಮೂರ್‍ಮಂದಿ=ಸತ್, ಚಿತ್, ಆನಂದ; ಬಸರಾಗು=ಆತ್ಮ ಜ್ಞಾನಿಯಾಗು; ಕಾಮೇರು = ಕಾರುಣ್ಯದ ಮೇರು; ಮುಗಿಲಿನ ತೊಟ್ಟಿಲು = ಅಶರೀರ ಸ್ಥಿತಿ (Supra-mental plane).

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...