Home / ಕವನ / ಕವಿತೆ / ಬಂತಾವ್ವಾ ಬಂತಾವ್ವಾ ಬಂತವ್ವಾ ಶ್ರಾವಣಾ

ಬಂತಾವ್ವಾ ಬಂತಾವ್ವಾ ಬಂತವ್ವಾ ಶ್ರಾವಣಾ

ಬಂತಾವ್ವಾ ಬಂತಾವ್ವಾ ಬಂತವ್ವಾ ಶ್ರಾವಣಾ
ಚಂದೇನ ಚಾರೇನ ಸಾಮೇರ ಚರಣಾ ||ಪಲ್ಲ||

ಮಠತುಂಬ ರಂಗೋಲಿ ಮುತೈದಿ ಬಾಲೇರು
ಪಡಿಹಿಗ್ಗು ಪಂಚಮಿ ಮಾಡ್ಯಾರೆ
ತೋರಮುತ್ತಿನ ಕಾಂತಿ ಮುತ್ತು ಮಾಣಿಕ ದಾಂತಿ
ಕಾಶೀಯ ಪೀತಾಂಬ್ರ ಉಟ್ಟಾರೆ ||೧||

ಪರಪಂಚ ಪಂಚೇತಿ ಫಜೀತಿ ಪುರಮಾಶಿ
ಕೀರ್ತನಾ ಕೇಳಾಗ ಹೋಗೇತೆ
ಉಟಸೀರಿ ಜಾರೇತೆ ಮುಡಿಸೆರಗು ಹಾರೇತೆ
ಗರತೇರ ಮಾನಾ ಮಾರೇತೆ ||೨||

ಸಾಮೇರ ಮಂಚಕ್ಕ ಪಂಚರಂಭೇರೇರಿ
ಹಣ್ಗಾಯಿ ನೀರ್‍ಗಾಯಿ ಆಗ್ಯಾರೆ
ಸಾಮೇರ ತೊಡಿಮ್ಯಾಗ ಆರೂರ ಹುಡಿಗೇರು
ಬಕಬಾರ್‍ಲೆ ಕಣ್ತಿರಿಗಿ ಬಿದ್ದಾರೆ ||೩||

ಗುರುಗೋಳು ಬಂದಾರೆ ಗುರುವಣ್ಣಿ ಕೂಡ್ಯಾರೆ
ಮಠದಾಗ ಹೆಂಡಿರ ಮಾಡ್ಯಾರೆ
ಹೋದೋರು ಆರ್‍ಮಂದಿ ಬಂದೋರು ಮೂರ್‍ಮಂದಿ
ಊರ್‍ಮಂದಿ ಹುಡಿಗೇರು ಬಸರಾಗೆ ||೪||

ಗೋಡಿ ಬುದಬುದು ಬಿದ್ದು ಪೀಠ ಫಡಫಡ ಎದ್ದು
ಸಾಮೇರು ಕಾಮೇರು ಆಗ್ಯಾರೆ
ನವಿಲೀನ ನಾರೇರ ಕದ್ದಾರೆ ಮೆದ್ದಾರೆ
ಮುಗಿಲೀನ ತೊಟ್ಟಿಲಾ ತೂಗ್ಯಾರೆ ||೫||
*****
ಶ್ರಾವಣ=ಆತ್ಮಿಕ ಶ್ರವಣಾ; ಸ್ವಾಮೇರು = ಭಗವಂತ; ಮಠ = ಬ್ರಹ್ಮ ತತ್ವ; ಬಾಲೇರು-ಹುಡಿಗೇರು-ಗರತೇರು-ಗುರುವಣ್ಣಿ-ಹೆಂಡಿರು = ಸರ್ವ ಆತ್ಮರು; ಪಂಚಮಿ=ಪಂಚೇಂದ್ರಿಯಗಳ ಕೂಟ; ಉಟಸೀರಿ= ದೇಹಾಭಿಮಾನ (Physical Consciousness); ಆರ್‍ಮಂದಿ = ಷಡ್ವೈರಿಗಳು; ಮೂರ್‍ಮಂದಿ=ಸತ್, ಚಿತ್, ಆನಂದ; ಬಸರಾಗು=ಆತ್ಮ ಜ್ಞಾನಿಯಾಗು; ಕಾಮೇರು = ಕಾರುಣ್ಯದ ಮೇರು; ಮುಗಿಲಿನ ತೊಟ್ಟಿಲು = ಅಶರೀರ ಸ್ಥಿತಿ (Supra-mental plane).

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...