ಖುಶಿ ಖುಶಿ ಹರೆಯಾವು ಕಸುವಿಂದ ಬಂದೇತೆ

ಖುಶಿ ಖುಶಿ ಹರೆಯಾವು ಕಸುವಿಂದ ಬಂದೇತೆ
ವಡಪೇಳ ಈರಣ್ಣ ವಡಪೇಳ ||ಪಲ್ಲ||

ಗುಗ್ಗೂಳ ಎಂದ್ಹೇಳ ಶಸ್ತ್ರಾವು ಎಂದ್ಹೇಳ
ಗರತೇರ ಮನಿಮನಿಗೆ ಕರಿತೇನ
ಹೊಸ್ತಿಲಕ ಒಂದ್ಹೆಣ್ಣ ಮುತ್ತೈದಿ ಹೇಳ್ತೇನ
ನಿನಗುಡಿಗೆ ಬಜಂತ್ರಿ ತರತೇನ ||೧||

ಜರತಾರಿ ನಾರ್‍ಯಾರ ಮುರತಾಪ ಮಾಡ್ತೇನ
ತುರುಬೀಗಿ ತುಂಬೀಯ ಹೆಣಿತೇನ
ಬೀಗ್ತೇರ ಕೊಡಪಾನ ಎದೆತುಂಬಿ ಹೊರತೇನ
ದಾರ್‍ಯಾಗ ಡಾಳಿಂಬ್ರ ಬೆಳಿತೇನ ||೨||

ಸುತ್ತೂರು ಸರದಾರ ಹತ್ತೂರು ಗಮ್ಮಾರ
ತಲವಾರ ತಾನೆಂದ ತರತಾನ
ಸುರಪೂರು ಭರಪೂರು ಪುರಿಹೆಣ್ಣು ಪುರುಪೂರು
ಪಲ್ಲಂಗ ಪಂಚಮಿ ಮೆರಿತಾನ ||೩||

ನಡದಾಗ ಗುಡಿಗ್ಯಾನ ಹುಲ್ಲುಲಿಗೊ ಹುಲಿಕಾಮ
ತೊಡಿಯಾಗ ತಂಬೂರಿ ಮಿಡಿದೈತೆ
ಉಟಸೀರಿ ಗಂಟಾಗ ಕ್ಯಾಕೀಯ ಹಾಕ್ಯಾನ
ತುರುಬೀನ ಗಿಣಿಯೂ ಹಾಡೈತೆ ||೪||

ತಡದರ ಸಾಯ್ತೇನಿ ತಡಿಯಾಕ ಹೊತ್ತಿಲ್ಲ
ನೆಲ್ಲಡಕಿ ನಿಂಬೀಯ ತಾತಾತಾ
ಗೊಲ್ಲಡಕಿ ಗೊಂಬಿನಾ ನಾಚೀಗಿ ಬಿಟ್ಟೇನಿ
ಬಾಬಾರ ಬರದಿದ್ರ ಹಾಹಾಹಾ ||೫||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೆಣ್ಣು
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೭೯

ಸಣ್ಣ ಕತೆ

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…