ಆ ಚಾಲಕ ವೇಗವಾಗಿ ವಾಹನವನ್ನು ಓಡಿಸಿ ಆಯ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ. ಅವನ ಅಜಾಗ್ರತೆ ಅವನಿಗೆ ಅರಿವಾಗಲೇ ಇಲ್ಲ. ಅವನಿಗೆ ಮರದ ಮೇಲೆ ಅತೀವ ಕೋಪ ಬಂತು. ಮರವನ್ನು ಕಡೆದು ಹಾಕಿದ. ಮಗುವಿನಂತೆ “ನಾನೇನು ಮಾಡಿದೆ? ನಿಂತ ಕಡೆ ನಿಂತಿದ್ದೆ. ನೀನೆ ನನ್ನನ್ನು ಬಂದು ಗುದ್ದಿ ನನ್ನ ಪ್ರಾಣ ತೆಗೆದಿರುವೆ. ಇದು ನ್ಯಾಯವೇ?” ಎಂದಿತು ಮರ, ಕೆಳಗೆ ಕೆಡವಿದ ಮರವನ್ನು ಕಾಲಿಂದ ತುಳಿದು ಕೋಪದಲ್ಲಿ ಕೂಗಾಡುತಿದ್ದ ಮನುಷ್ಯ ಮರಕ್ಕೆ ರಾಕ್ಷಸನಂತೆ ಕಂಡಿತು.
*****
Related Post
ಸಣ್ಣ ಕತೆ
-
ವರ್ಗಿನೋರು
ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…
-
ಮೇಷ್ಟ್ರು ಮುನಿಸಾಮಿ
ಪ್ರಕರಣ ೮ ಮಾರನೆಯ ದಿನ ಬೆಳಗ್ಗೆ ರಂಗಣ್ಣನು, ‘ಶಂಕರಪ್ಪ ! ನೀವೂ ಗೋಪಾಲ ಇಬ್ಬರೂ ನೆಟ್ಟಗೆ ಜನಾರ್ದನಪುರಕ್ಕೆ ಹಿಂದಿರುಗಿ ಹೋಗಿ, ನನ್ನ ಸಾಮಾನುಗಳನ್ನೆಲ್ಲ ಜೋಕೆಯಿಂದ ತೆಗೆದುಕೊಂಡು ಹೋಗಿ.… Read more…
-
ಕಳಕೊಂಡವನು
ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…
-
ಸಾವು
ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…
-
ಪ್ಲೇಗುಮಾರಿಯ ಹೊಡೆತ
ಪ್ರಕರಣ ೧೩ ಕೆಲವು ದಿನಗಳ ತರುವಾಯ ತಿಪ್ಪೂರು ಹೋಬಳಿಯ ಪಾಠಶಾಲೆಗಳಿಂದ ಅನಿಷ್ಟ ವರ್ತಮಾನಗಳು ಬರಲಾರಂಭಿಸಿದುವು. ಹಳ್ಳಿಯಲ್ಲಿ ಪ್ಲೇಗುಮಾರಿ ಹೊಕ್ಕಿದೆ; ಒಂದೆರಡು ಸಾವುಗಳಾದುವು; ಜನರೆಲ್ಲ ಹೊಲಗಳಲ್ಲಿ ಗುಡಿಸಿಲುಗಳನ್ನು ಹಾಕಿಕೊಳ್ಳುತ್ತಿದಾರೆ;… Read more…