Home / ಕವನ / ಕವಿತೆ / ಬಾಗಿಲ ತೆಗೆಯಮ್ಮ

ಬಾಗಿಲ ತೆಗೆಯಮ್ಮ

ಕಳೆಯನು ಕಳೆಯದೆ ನಾನಿನ್ನ ಕಾಣೆನು
ಸರಸಮ್ಮ ನೀನೆಷ್ಟು ಕಳವಂತಿಯೆ
ಹೊಲದಲ್ಲಿ ತುಂಬಿರುವ ದನಗಳನಟ್ಟದೆ
ಬೆಳೆಯನ್ನು ಕಾಣೆನು ರಸವಂತಿಯೆ || ೧ ||

ಈ ಮಣ್ಣು ಈ ನೀರು ಗಾಳಿ ಬೆಂಕಿಗಳಿಂದ
ಹೊಲದಲ್ಲಿ ಬೆಳೆಯನು ಬೆಳೆಯಬಹುದು
ಬರಿಸೊಪ್ಪೆ ಬೆಳೆದರೆ ಹೊಟ್ಟಿಗೆ ಬರಿಮಣ್ಣು
ಕಳೆಯ ಕಾಳಿಲ್ಲದೆ ಗೆಯ್ಮೆ ಬರಿದು || ೨ ||

ಅಡವಿಯ ಪೈಣದಿ ಕಣ್ಣು ಕಾಣಿಸದಂತೆ
ಎಡರು ತೊಡರುಗಳಲ್ಲಿ ನಾನಿರುವೆನು
ತೊಡರನು ಬಿಡಿಸಲೇ ಬಡಿದಾಟ ಸಾಗಿದೆ
ಹೊಡಮುರಿದೇಳ್ವುದು ಬಯಕೆ ಬಳ್ಳಿ || ೩ ||

ಆಗೊಮ್ಮೆ ಈಗೊಮ್ಮೆ ಮರಗಳ ಸಂದೀಲೆ
ಹಣಿಕೆ ಹಾಕುವುದಿನ್ನು ಬಯಕೆ ಬಾನು
ಛಳಕು ಹೊಡೆದಂತಾಗಿ ಬೆಳಕನ್ನು ಕಾಣುವೆ
ಕೈಯಲ್ಲಿ ಸಿಗಲದು ಕೋಲು ಏನು || ೪ ||

ಭೂಮಿಗೆ ಬಾರದೆ ಮಿಂಚನು ಮೆರೆಯುತ್ತ
ಮೋಡದ ಮರೆಯಿಂದ ನೀನಿಳಿಯಲಾರೆ
ನಿನಗಾಗಿ ಕಾಯುತ್ತ ಹಳ್ಳ ಕೆರೆಗಳಂತೆ
ಬರಿದಾದ ಎದೆಯಿಂದ ನಾನೇರಲಾರೆ || ೫ ||

ನೂರಾರು ಸಂತೆಯ ಮಾಡಿದರು ಬರಿಗೈಯಿ
ಕೊಡುವುತ್ತ ನಿಂತೇನು ಹತಭಾಗ್ಯನು
ತಿರುಗಿ ದಣಿದದ್ದೊಂದೆ ಕೂಗಿ ಮಾರಿದ್ದೊಂದೆ
ಕೈಯಲ್ಲಿ ಉಳಿದಿಲ್ಲ ಚಿಕ್ಕಾಸೇನೂ || ೬ ||

ಎಷ್ಟೊತ್ತು ಕಾಯ್ಬೇಕು ತೆಗೆಯಮ್ಮ ಬಾಗಿಲ
ಭಿಕ್ಷುಕ ನಿಂತೀನಿ ಮನಿಯ ಮುಂದೆ
ಏನಾದರೊಂದಿಷ್ಟು ಉಳಿದಿದ್ದು ಕೊಟ್ಟರೆ
ಹರಸುತ್ತ ಹೋಗುವೆ ಇನ್ನು ಮುಂದೆ || ೭ ||
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...