ಬಾಗಿಲ ತೆಗೆಯಮ್ಮ

ಕಳೆಯನು ಕಳೆಯದೆ ನಾನಿನ್ನ ಕಾಣೆನು
ಸರಸಮ್ಮ ನೀನೆಷ್ಟು ಕಳವಂತಿಯೆ
ಹೊಲದಲ್ಲಿ ತುಂಬಿರುವ ದನಗಳನಟ್ಟದೆ
ಬೆಳೆಯನ್ನು ಕಾಣೆನು ರಸವಂತಿಯೆ || ೧ ||

ಈ ಮಣ್ಣು ಈ ನೀರು ಗಾಳಿ ಬೆಂಕಿಗಳಿಂದ
ಹೊಲದಲ್ಲಿ ಬೆಳೆಯನು ಬೆಳೆಯಬಹುದು
ಬರಿಸೊಪ್ಪೆ ಬೆಳೆದರೆ ಹೊಟ್ಟಿಗೆ ಬರಿಮಣ್ಣು
ಕಳೆಯ ಕಾಳಿಲ್ಲದೆ ಗೆಯ್ಮೆ ಬರಿದು || ೨ ||

ಅಡವಿಯ ಪೈಣದಿ ಕಣ್ಣು ಕಾಣಿಸದಂತೆ
ಎಡರು ತೊಡರುಗಳಲ್ಲಿ ನಾನಿರುವೆನು
ತೊಡರನು ಬಿಡಿಸಲೇ ಬಡಿದಾಟ ಸಾಗಿದೆ
ಹೊಡಮುರಿದೇಳ್ವುದು ಬಯಕೆ ಬಳ್ಳಿ || ೩ ||

ಆಗೊಮ್ಮೆ ಈಗೊಮ್ಮೆ ಮರಗಳ ಸಂದೀಲೆ
ಹಣಿಕೆ ಹಾಕುವುದಿನ್ನು ಬಯಕೆ ಬಾನು
ಛಳಕು ಹೊಡೆದಂತಾಗಿ ಬೆಳಕನ್ನು ಕಾಣುವೆ
ಕೈಯಲ್ಲಿ ಸಿಗಲದು ಕೋಲು ಏನು || ೪ ||

ಭೂಮಿಗೆ ಬಾರದೆ ಮಿಂಚನು ಮೆರೆಯುತ್ತ
ಮೋಡದ ಮರೆಯಿಂದ ನೀನಿಳಿಯಲಾರೆ
ನಿನಗಾಗಿ ಕಾಯುತ್ತ ಹಳ್ಳ ಕೆರೆಗಳಂತೆ
ಬರಿದಾದ ಎದೆಯಿಂದ ನಾನೇರಲಾರೆ || ೫ ||

ನೂರಾರು ಸಂತೆಯ ಮಾಡಿದರು ಬರಿಗೈಯಿ
ಕೊಡುವುತ್ತ ನಿಂತೇನು ಹತಭಾಗ್ಯನು
ತಿರುಗಿ ದಣಿದದ್ದೊಂದೆ ಕೂಗಿ ಮಾರಿದ್ದೊಂದೆ
ಕೈಯಲ್ಲಿ ಉಳಿದಿಲ್ಲ ಚಿಕ್ಕಾಸೇನೂ || ೬ ||

ಎಷ್ಟೊತ್ತು ಕಾಯ್ಬೇಕು ತೆಗೆಯಮ್ಮ ಬಾಗಿಲ
ಭಿಕ್ಷುಕ ನಿಂತೀನಿ ಮನಿಯ ಮುಂದೆ
ಏನಾದರೊಂದಿಷ್ಟು ಉಳಿದಿದ್ದು ಕೊಟ್ಟರೆ
ಹರಸುತ್ತ ಹೋಗುವೆ ಇನ್ನು ಮುಂದೆ || ೭ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೋಟೇಲಿನ ಹಾಸಿಗೆಯಲ್ಲಿ ಸಿಕ್ಕಿದ ತಿಗಣಿಗೆ
Next post ಮೂರು ಧರ್ಮಗಳ ಸಮನ್ವಯ ಕೇಂದ್ರ ‘ಹರಿಶ್ಚಂದ್ರ ಕಾವ್ಯ’

ಸಣ್ಣ ಕತೆ

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

cheap jordans|wholesale air max|wholesale jordans|wholesale jewelry|wholesale jerseys