Home / ಕವನ / ಕವಿತೆ / ಎಲ್ಲಿಹನು ನನ್ನ ಪತಿ

ಎಲ್ಲಿಹನು ನನ್ನ ಪತಿ

ಓ ಗಿರಿಯೆ ಮರಗಳೇ ಓ ಜೀವ ಜೀವಗಳೆ
ನನ್ನೊಡೆಯ ಎಲ್ಲಿಹನು ಬೇಗ ಪೇಳಿ
ಸಾಯುತಿಹೆ ತರಹರಿಸಿ ನಿರ್ಜೀವವಾಗಿರುವೆ
ಅವನಿಲ್ಲದಾನಿನ್ನು ಹೇಗೆ ಇರಲಿ || ೧ ||

ಬಾವಿಯಲಿ ಜಲವೆಲ್ಲ ಬತ್ತಿ ಹೋದಂತಿಹುದು
ಹಣ್ಣಿನಲಿ ರಸವೆಲ್ಲ ಒಣಗಿರುವುದು
ದೀಪದಲಿ ಎಣ್ಣೆಯೇ ತಿರಿಹೋಗಿಹುದಲ್ಲ
ಬಾಳ ಬಳ್ಳಿಯ ರಸವು ಇಂಗಿರುವುದು || ೨ ||

ಇಷ್ಟು ದಿನ ಅವನಿದ್ದ, ಇದ್ದಂತೆ ಇದ್ದಿಲ್ಲ,
ಈಗ ಅವನಿಲ್ಲದೇ ಬರಿದಾಗಿದೆ
ಗಂಡ ಸತ್ತ ಮೇಲೆ ಹೆಂಡತಿಯು ಜಾಣಳೆ
ಕಳಕೊಂಡು ಹುಡುಕುತಿಹೆ ಸಿಗದಾಗಿದೆ || ೩ ||

ಯಾವುದಕೆ ಸಿಟ್ಟಾಗಿ ಹೋಗಿಹನೊ ನನ್ನ ದೊರೆ
ಎನ್ನ ಸಿರಿ ಎನ್ನ ಬಲ ಸರ್ವಸ್ವವು
ಅವನಿಲ್ಲದಿರೆ ನಾನು ಜೀವ ಹಿಡಿದಿರಲಾರೆ
ಬಾವಿಯೋ ಕೆರೆ ತೊರೆಯೊ ಕರೆಯುತಿಹವು || ೪ ||

ಸತ್ತಂತೆ ಬದುಕಿರುವ ಈ ಬಾಳಲೇನಿಹುದು
ಸತ್ತು ಹುಟ್ಟುವ ಇಂಥ ಬಾಳು ಸಾಕು
ಬಿಟ್ಟು ಬಿಟ್ಟೋಡಿದರೆ ಆಳುವಾ ಪತಿದೇವ
ಅಳಬೇಕೊ ನಗಬೇಕೋ ಸಾಕುಸಾಕು || ೫ ||

ಯಾವ ಪ್ರಭುವಿಂದೆನ್ನ ಮಾಂಗಲ್ಯ ಸೌಭಾಗ್ಯ
ಯಾವ ಕೈಯಾಸರೆಯೆ ನನ್ನ ಉಸಿರು
ಅವನನ್ನು ಕಳಕೊಂಡು ಇನ್ನೆಲ್ಲಿ ಸೌಭಾಗ್ಯ
ಕೆಳಗೆ ಮೇಲಾಗುತಿದೆ ಜೀವದುಸಿರು || ೬ ||

ಯೌವನದ ದೇಹವಿದೆ ಅಂದವಿದೆ ಚೆಂದವಿದೆ
ಮನೆಯೊಳಗೆ ಸಿರಿಸಂಪದೆಲ್ಲವಿಹುದು
ಉಂಡು ಉಡಲಿಕ್ಕೆ ಕೊರೆಯೆ ತಿಂದುತೇಗಲು ಅರೆಯೆ
ಏನಿದ್ದು ಎಲ್ಲವೂ ಬರಿದೊ ಬರಿದು || ೭ ||

ನನ್ನ ಕೂಗನ್ನಷ್ಟು ಕೇಳುವಿರ ಗೆಳತಿಯರೆ
ಕೇಳಿ ಎದೆಯಳಲನ್ನು ತೋಡಿಕೊಳುವೆ
ಏನಾದರೊಂದಿಷ್ಟು ಸಾಂತ್ವನವ ಹೇಳಿರಿ
ದುರ್ಭಾಗ್ಯೆ ನೊಂದವಳು ಬೇಡಿಕೊಳುವೆ || ೮ ||
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...