Home / ಕವನ / ಕವಿತೆ / ಎದೆಯಾಳದುಲುಹು

ಎದೆಯಾಳದುಲುಹು

ಋಷಿಗಳ ಮನದಾಗೆ ಓಂಕಾರ ಹರದಂಗೆ
ಬೆಸಲಾಗಿ ನಡೆದಾವೆ ತುಂತುಂಬಿ ಮೋಡ
ನಿಂತಂಗೆ ನಿಂತಲ್ಲಿ ಕುಂತಂಗೆ ಕುಂತಲ್ಲೆ
ಚಿಂತ್ಯಾಗೆ ಮೈಮರೆತ ಹಸಿರಿನ ಕಾಡ || ೧ ||

ಧ್ಯಾನದಾಗ ಸ್ವರ್ಗಾನ ಕಂಡಾಗ ತುಟಿಯಾಗೆ
ಎಳೆನಗೆ ಚಿಗತಂಗ ನಗತಾದ ಹುಲ್ಲು
ಹಗಲೆಲ್ಲ ಗಾಳೆಪ್ಪ ಗೋಳಿಸಿ ಹೋಗ್ಯಾನೆ
ಮೌನಗೌರಿ ಆಗ್ಯಾದೆ ಸೃಷ್ಟಿ ಸೊಲ್ಲು || ೨ ||

ಏನೇನೂ ಭಾವ ಹರದಾಡತಾವೆ
ನಾನೇನ ಬಲ್ಲೆನಮ್ಮ
ಧ್ಯಾನಾದಿ ನೀನು ಕುಳಿತಾಗ ನಾನು
ನನ್ನನ್ನೆ ಮರೆವೆನಮ್ಮಾ || ೩ ||

ಇದು ಬರೀ ಶಾಂತಿ ಇಲ್ಲಿಲ್ಲ ಗುಲ್ಲು
ಸೊಲ್ಲೆಲ್ಲ ಮೌನದಲ್ಲೆ
ಕದಡಿರುವ ನೀರು ತಿಳಿಯಾಗಿ ನಿಂತು
ಆಕಾಶ ಹೃದಯದಲ್ಲೆ || ೪ ||

ನಿನ್ನಿಂದ ದೂರ ಬಲುದೂರ ಹೋದೆ
ಪಡಬಾರದಂಥ ಕಷ್ಟ
ತಾಯನ್ನು ತೊರೆದು ಗಿಳಿಮರಿಯು ಬೀಳೆ
ನಾಯಿನರಿಗದುವೆ ಇಷ್ಟ || ೫ ||

ಬಹುದಿನಕೆ ನಿನ್ನ ಮೊಗನೋಡುವಂಥ
ಸಿಗಲಾರದಂಥ ಸೊಗವು
ಎಂದಾದರೊಮ್ಮೆ ಸಿಕ್ಕಾಗ ಎದೆಯು
ಅಳುವೆಲ್ಲ ಹರಿವ ನಗುವು || ೬ ||

ಒಂಟಿತನ ಸಾಕು ಅದು ನರಕ ಸಮವು
ನಾನಾದೆ ಕೊಳೆತ ಹುಳುವು
ನೀನೇಕೆ ನನ್ನ ಕೈಹಿಡಿಯದಂತೆ
ದೂಡುತಿಹೆ ತುಂಬಲಳುವು || ೭ ||

ನಿನ್ನನ್ನು ಬಿಟ್ಟು ನಾ ಬರಿಯ ನೆರಳು
ಒಳಹೊರಗೆ ಕಪ್ಪು ಕಪ್ಪೆ
ಏನಿದ್ದರೇನು ಪ್ರಾಣವೇ ಇರದೆ
ಕಸವಾಗಿ ಅಳಿವ ಸೊಪ್ಪೆ || ೮ ||

ಬಿಡಬೇಡ ನನ್ನ ನಾನಿನ್ನ ಹಸುವು
ಪಶುವಾಗದಂತೆ ಸಲಹು
ಏರಿಳುವುಗಳಲಿ ತೊಳಲುತ್ತೆ ಸೋತೆ
ಇದೆ ಎದೆಯ ಆಳದುಲುಹು || ೯ ||
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...