Home / ಕವನ / ಕವಿತೆ / ಎದೆಯಾಳದುಲುಹು

ಎದೆಯಾಳದುಲುಹು

ಋಷಿಗಳ ಮನದಾಗೆ ಓಂಕಾರ ಹರದಂಗೆ
ಬೆಸಲಾಗಿ ನಡೆದಾವೆ ತುಂತುಂಬಿ ಮೋಡ
ನಿಂತಂಗೆ ನಿಂತಲ್ಲಿ ಕುಂತಂಗೆ ಕುಂತಲ್ಲೆ
ಚಿಂತ್ಯಾಗೆ ಮೈಮರೆತ ಹಸಿರಿನ ಕಾಡ || ೧ ||

ಧ್ಯಾನದಾಗ ಸ್ವರ್ಗಾನ ಕಂಡಾಗ ತುಟಿಯಾಗೆ
ಎಳೆನಗೆ ಚಿಗತಂಗ ನಗತಾದ ಹುಲ್ಲು
ಹಗಲೆಲ್ಲ ಗಾಳೆಪ್ಪ ಗೋಳಿಸಿ ಹೋಗ್ಯಾನೆ
ಮೌನಗೌರಿ ಆಗ್ಯಾದೆ ಸೃಷ್ಟಿ ಸೊಲ್ಲು || ೨ ||

ಏನೇನೂ ಭಾವ ಹರದಾಡತಾವೆ
ನಾನೇನ ಬಲ್ಲೆನಮ್ಮ
ಧ್ಯಾನಾದಿ ನೀನು ಕುಳಿತಾಗ ನಾನು
ನನ್ನನ್ನೆ ಮರೆವೆನಮ್ಮಾ || ೩ ||

ಇದು ಬರೀ ಶಾಂತಿ ಇಲ್ಲಿಲ್ಲ ಗುಲ್ಲು
ಸೊಲ್ಲೆಲ್ಲ ಮೌನದಲ್ಲೆ
ಕದಡಿರುವ ನೀರು ತಿಳಿಯಾಗಿ ನಿಂತು
ಆಕಾಶ ಹೃದಯದಲ್ಲೆ || ೪ ||

ನಿನ್ನಿಂದ ದೂರ ಬಲುದೂರ ಹೋದೆ
ಪಡಬಾರದಂಥ ಕಷ್ಟ
ತಾಯನ್ನು ತೊರೆದು ಗಿಳಿಮರಿಯು ಬೀಳೆ
ನಾಯಿನರಿಗದುವೆ ಇಷ್ಟ || ೫ ||

ಬಹುದಿನಕೆ ನಿನ್ನ ಮೊಗನೋಡುವಂಥ
ಸಿಗಲಾರದಂಥ ಸೊಗವು
ಎಂದಾದರೊಮ್ಮೆ ಸಿಕ್ಕಾಗ ಎದೆಯು
ಅಳುವೆಲ್ಲ ಹರಿವ ನಗುವು || ೬ ||

ಒಂಟಿತನ ಸಾಕು ಅದು ನರಕ ಸಮವು
ನಾನಾದೆ ಕೊಳೆತ ಹುಳುವು
ನೀನೇಕೆ ನನ್ನ ಕೈಹಿಡಿಯದಂತೆ
ದೂಡುತಿಹೆ ತುಂಬಲಳುವು || ೭ ||

ನಿನ್ನನ್ನು ಬಿಟ್ಟು ನಾ ಬರಿಯ ನೆರಳು
ಒಳಹೊರಗೆ ಕಪ್ಪು ಕಪ್ಪೆ
ಏನಿದ್ದರೇನು ಪ್ರಾಣವೇ ಇರದೆ
ಕಸವಾಗಿ ಅಳಿವ ಸೊಪ್ಪೆ || ೮ ||

ಬಿಡಬೇಡ ನನ್ನ ನಾನಿನ್ನ ಹಸುವು
ಪಶುವಾಗದಂತೆ ಸಲಹು
ಏರಿಳುವುಗಳಲಿ ತೊಳಲುತ್ತೆ ಸೋತೆ
ಇದೆ ಎದೆಯ ಆಳದುಲುಹು || ೯ ||
*****

Tagged:

Leave a Reply

Your email address will not be published. Required fields are marked *

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...