ನರನ ಆಶೆ

ನೆಲದ ಮೇಲೆ ಬಾಳುತಿಹನು ಹಾರಲೊಲ್ಲ | ನರನು
ಹಾರುವಾಸೆ ಬಿಟ್ಟು ಅವನು ಬಾಳಲಿಲ್ಲ || ೧ ||

ಮೇಲೆ ಮೇಲೆ ಹಾರಲೆಂದು ಏಣಿ ಹಾಕಿ | ಅಲ್ಲಿ
ಕಾಲಹಾದಿ ಇಲ್ಲವೆಂದು ಎಣಿಕೆ ಹಾಕಿ || ೨ ||

ಮಂಜುಗಡ್ಡೆ ಮುಚ್ಚಿಬಿಟ್ಟು ಕಾಣದಂತೆ | ಶಿಖರ
ತಲೆಯನತ್ತ ಮುಗಿಲಿನಲಿ ಸೇರಿದಂತೆ || ೩ ||

ಅದರ ಮಂಜು ನಂಜುಗಟ್ಟಿ ಕಾಲ ಸೋಕೆ | ಅದನು
ತಡಕಿ ಹತ್ತಿ ಅಂತ್ಯವನ್ನು ಕಾಂಬ ಬಯಕೆ || ೪ ||

ಹಿಮಾಲಯದ ಗೌರಿಹರನ ಕಾಣಲೆಂದು | ಮನುಜ
ಗಂಗಮಾಯಿ ದಾರಿ ಹಿಡಿದು ನಡೆವ ಮಿಂದು || ೫ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೇವರು ದೊಡ್ಡವ
Next post ಕುವೆಂಪು ಅವರ ಸ್ಫೋಟ ಪ್ರತಿಭೆ

ಸಣ್ಣ ಕತೆ

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…