ನರನ ಆಶೆ

ನೆಲದ ಮೇಲೆ ಬಾಳುತಿಹನು ಹಾರಲೊಲ್ಲ | ನರನು
ಹಾರುವಾಸೆ ಬಿಟ್ಟು ಅವನು ಬಾಳಲಿಲ್ಲ || ೧ ||

ಮೇಲೆ ಮೇಲೆ ಹಾರಲೆಂದು ಏಣಿ ಹಾಕಿ | ಅಲ್ಲಿ
ಕಾಲಹಾದಿ ಇಲ್ಲವೆಂದು ಎಣಿಕೆ ಹಾಕಿ || ೨ ||

ಮಂಜುಗಡ್ಡೆ ಮುಚ್ಚಿಬಿಟ್ಟು ಕಾಣದಂತೆ | ಶಿಖರ
ತಲೆಯನತ್ತ ಮುಗಿಲಿನಲಿ ಸೇರಿದಂತೆ || ೩ ||

ಅದರ ಮಂಜು ನಂಜುಗಟ್ಟಿ ಕಾಲ ಸೋಕೆ | ಅದನು
ತಡಕಿ ಹತ್ತಿ ಅಂತ್ಯವನ್ನು ಕಾಂಬ ಬಯಕೆ || ೪ ||

ಹಿಮಾಲಯದ ಗೌರಿಹರನ ಕಾಣಲೆಂದು | ಮನುಜ
ಗಂಗಮಾಯಿ ದಾರಿ ಹಿಡಿದು ನಡೆವ ಮಿಂದು || ೫ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೇವರು ದೊಡ್ಡವ
Next post ಕುವೆಂಪು ಅವರ ಸ್ಫೋಟ ಪ್ರತಿಭೆ

ಸಣ್ಣ ಕತೆ

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

cheap jordans|wholesale air max|wholesale jordans|wholesale jewelry|wholesale jerseys