Home / ಕವನ / ಕವಿತೆ / ಜಗದಂಬೆ

ಜಗದಂಬೆ

ಅಮ್ಮಾ ತಾಯಿ ಜಗದಂಬೆ ದೇವಿ ಮಕ್ಕಳನು ಕಾಯಿ ತಾಯಿ
ನಮ್ಮ ಬಿಟ್ಟು ನೀ ಹೋಗಬೇಡ ನಾವಿನ್ನು ಎಳೆಯ ಕಾಯಿ || ೧ ||

ನಿನ್ನ ನಾಮ ನೂರಾರು ಕೋಟಿ ಕರೆಕರೆದು ಸಾಲದಮ್ಮ
ನಿನ್ನ ರೂಪ ಕೋಟ್ಯಾನುಕೋಟಿ ಎಣಿಸಲಿಕೆ ಬಾರದಮ್ಮ || ೨ ||

ಗರ್ಭದಿಂದ ಹೊರಬಂದು ಕೂಸು ತೆರಿತಾದೆ ಬಾಯಿ ಅಮ್ಮಾ
ನೋವು ಬೇವುಗಳ ಸಾವು ಕೊನೆಗೆ ತಾ ಕರೀತಾದೆ ಅಮ್ಮಾ || ೩ ||

ಹಡೆದ ತಾಯಿ ಹಾಲುಣಿಸಿ ಬೆಳೆಸಿ ಮುದ್ದನ್ನೆ ಹೊದಿಸುವಾಕಿ
ಕರುಳು ಕುಡಿಯ ಎಳೆ ಸೋಕದಂತೆ ಬೆಳೆಸೀಯಿ ಅನ್ನ ಹಾಕಿ|| ೪ ||

ವಿಶ್ವವನ್ನೆ ನೀ ಆಡಿಸುತ್ತ ಜೋಗುಳದ ಗಾನದಲ್ಲಿ
ಪ್ರೀತಿ ತೊಟ್ಟಿಲಲಿ ತೂಗುತಿರುವೆ ಹಗಲಿರುಳು ಜೋಕೆಯಲ್ಲಿ|| ೫ ||

ತಾಯಿ ತಾಯಿ ಎಲ್ಲೆಲ್ಲು ತಾಯಿ ಮರಗಿಡದಿ ತಾಯಿ ದೇವಿ
ಜೀವ ಜೀವ ಉಸಿರಾಡುವೆಲ್ಲ ತಾಯಿಯದೆ ಒಲುಮೆ ದೇವಿ|| ೬ ||

ನೀರು ನೆಲವು ಆ ಬಾನುಗಳನು ಜೀವಿಗಳು ತುಂಬ ಹರಡಿ
ಪ್ರಾಣದೆಲ್ಲ ನಲಿದಾಟ ಲೀಲೆ ತಾಯಮ್ಮ ಹಡೆದ ಮೋಡಿ|| ೭ ||

ಪಂಚ ಪ್ರಾಣ ನೀ ಪಂಚಭೂತಗಳ ಐದು ಮುಖವ ತಾಳಿ
ಪ್ರಾಣಿ ಪ್ರಾಣಿಗಳ ಸೃಪ್ಪಿಗೊಳಿಸಿ ಅನಂತ ರೂಪಗಳಲಿ|| ೮ ||

ಗಾಳಿಯಾಗಿ ಎದೆಯುಸಿರು ಉಸಿರು ಓಡಾಡೊ ಸೂತ್ರ ನೀನೆ
ನೀರು ರಕ್ತ ಹರಿಹರಿದು ರಸದ ಜೇಂಗಡಲ ಒಡಲು ನೀನೆ|| ೯ ||

ಬೆಂಕಿಯಾಗಿ ಉರಿ ಉರಿದು ಚೈತನ್ಯದಗ್ನಿ ನೀನೆ
ಮಣ್ಣಿನಲ್ಲಿ ಧಾತುಗಳ ಸತ್ವ ಬೇರಿಳಿವ ತತ್ವ ನೀನೆ|| ೧೦ ||

ಗಗನದಲ್ಲಿ ಬಯಲಾದ ಶೂನ್ಯ ತೆರೆ ಬಾಗಿಲಾಚೆ ನೀನು
ಸೊಗದ ರಾಣಿ ಸೃಪ್ಪಿಯಲಿ ಚೆಲುವು ದಿನದಿನವು ಹೊಸತು ನೀನು|| ೧೧ ||

ಅನ್ನ ಧಾನ್ಯಗಳ ಹೂವು ಹಣ್ಣುಗಳ ಮಡಿಲ ಸಸ್ಯರಾಶಿ
ಗಿರಿಯ ಸಾನುಗಳ ವನದ ಸೀಮೆಗಳ ಹಸಿರವುಡಿಗೆಯರಸಿ|| ೧೨ ||

ಸ್ವರಗಳಲ್ಲಿ ಸಾವಿರದ ಭೇದ ಓಂಕಾರ ನಾದ ಮೂಲ
ವರ್ಣಗಳಲಿ ಅಗಣಿತ ಭೇದ ನಿರ್ವರ್ಣ ವರ್ಣ ಮೂಲ || ೧೩ ||

ಹುಟ್ಟಿ ಸತ್ತು ಹುಟ್ಟಿರುವ ಕ್ಷರಗಳಲಿ ಅಕ್ಷರಾಂಬೆ ನೀನು
ಏಳು ಬೀಳು ಅಲೆ ಲೀಲೆ ಕೆಳಗೆ ಅವಿನಾಶಿ ಕಡಲು ನೀನು || ೧೪ ||
*****

Tagged:

Leave a Reply

Your email address will not be published. Required fields are marked *

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...