ತಾಯಿ ಸರಸ್ವತಿ

ಬೇಗನೆ ಬಾರಮ್ಮಾ ತಾಯಿ ಸರಸ್ವತಿ
ಬೇಗನೆ ಬಾರೇ ಮನಮಂದಿರಕೆ || ಪ ||

ಚಿತ್ತ ಸರಸಿಯನು ತಿಳಿಗೊಳಿಸಮ್ಮಾ
ನಿತ್ಯವು ಅರಳಲಿ ಹೃದಯಕಮಲವಲ್ಲಿ
ಭಾವ ಸುಗಂಧವ ಎಲ್ಲಿಡೆ ಬೀರಲಿ
ಪಾವನಗೊಳಿಸೇ ಅದರಲಿ ಕುಳಿತು || ೧ ||

ಎದೆಯ ಬಟ್ಟಲು ಭಕ್ತಿ ತೀರ್ಥದಿ ತುಂಬಿ
ಹದವಾಗಿ ತುಳುಕಲಿ ಕಂಬನಿ ಧಾರಾ
ತೊಳೆದು ಹೋಗಲಿ ನನ್ನ ಮಲಿನತೆಯೆಲ್ಲಾ
ಹೂ ಹಗುರಾಗಲಿ ಜೀವನ ಭಾರಾ || ೨ ||

ಪಾಪ ಕೂಪಗಳು ಅಳಿಯಲಿ ತಾವೇ
ತಾಪ ತಲ್ಲಣಗಳು ಬಾಧಿಸದಿರಲಿ
ದೋಷರಾಶಿ ಕಸ ಉರಿದು ಹೋಗಲಿ
ಪೋಷಿಸುತಲಿ ನೀ ನೆಲೆಸಿರು ತಾಯಿ || ೩ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೂಲಿಯಾನ
Next post ಹಿಂದೂಮುಸಲ್ಮಾನರ ಐಕ್ಯ – ೩

ಸಣ್ಣ ಕತೆ

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…