ಹೋಗೋಣ ತೀರಕೆ

ಹೋಗೋಣ ಬಾರೆ ಸಖೀ ತೀರಕೆ
ಕಲಕಲ ಹರಿಯುವ ನದಿಯಾ ತೀರಕೆ || ಪ||

ಮಧುರ ರಸಾಮೃತ ನಾದವ ಹರಿಸುತ
ಮೋಹನ ಮುರಳೀ ಲೋಲನು ಇರುವ
ಹಸಿರೆಳೆ ಹುಲ್ಲನು ಮೇಯದೆ ಆಲಿಸಿ
ಗೋವುಗಳೆಲ್ಲಾ ನಿಂತಿಹ ತೀರಕೆ || ೧ ||

ತಳಿರಿನ ಸೊಗಸಿನ ಹಾಸಿಗೆ ಹಾಸಿ
ವಿಧ ವಿಧ ಹೂಗಳ ಮಾಲೆಯನರ್ಪಿಸಿ
ತೆಂಗಿನ ಗರಿಗಳ ಚಾಮರ ಬೀಸಿ
ವನದೇವಿಯು ಸೇವೆಯ ಗೈದಿಹಳು || ೨ ||

ಮನೆಗಳ ಜಂಜಡ ಕೆಲಸವ ಬಿಟ್ಟು
ಮನವನು ತಣಿಸಲು ಇಹವನು ಮರೆತು
ಗೋಪಾಲನ ಸಂಗೀತವ ಸವಿಯಲು
ಗೋಪಿಯರೆಲ್ಲರು ಹೋಗುತಲಿರುವರು || ೩ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸುಲೇಮಾನ
Next post ಹಿಂದೂಮುಸಲ್ಮಾನರ ಐಕ್ಯ – ೫

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…